Breaking News

ದೆಹಲಿ ಜನತೆ ಹೆದರಬೇಡಿ, ಪ್ಲಾಸ್ಮಾ ಬ್ಯಾಂಕ್ ಆರಂಭ: ಸಿಎಂ ಕೇಜ್ರಿವಾಲ್

Spread the love

ನವದೆಹಲಿ: ಕೊರೊನಾಗೆ ಹೆದರುವ ಅಗತ್ಯವಿಲ್ಲ ಎಂದು ದೆಹಲಿಯ ಜನತೆಗೆ ಸಿಎಂ ಅರವಿಂದ್ ಕೇಜ್ರಿವಾಲ್ ಭರವಸೆ ನೀಡಿದ್ದಾರೆ.

ದೇಶದ ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಕೊರೊನಾ ಸೋಂಕಿತರ ಸಂಖ್ಯೆ 1 ಲಕ್ಷದ ಗಡಿಯನ್ನು ದಾಟಿದೆ. ಆದ್ರೆ ಜನರು ಆತಂಕಕ್ಕೊಳಗಾಗೋದು ಬೇಡ. ಈಗಾಗಲೇ 1 ಲಕ್ಷ ಜನರಲ್ಲಿ ಅಂದಾಜು 72 ಸಾವಿರ ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೆಹಲಿಯಲ್ಲಿ ಪ್ಲಾಸ್ಮಾ ಬ್ಯಾಂಕ್ ಸಹ ಆರಂಭಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಬಂದು ಪ್ಲಾಸ್ಮಾ ದಾನ ಮಾಡಿ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಮನವಿ ಮಾಡಿಕೊಂಡಿದ್ದಾರೆ.

25 ಸಾವಿರ ಪ್ರಕರಣಗಳಲ್ಲಿ 15 ಸಾವಿರ ಜನರಿಗೆ ಮನೆಗಳಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ. ದೆಹಲಿಯಲ್ಲಿ ಕೊರೊನಾದಿಂದ ಸಾವನ್ನಪ್ಪತ್ತಿರೋ ಸಂಖ್ಯೆಯಲ್ಲಿ ಇಳಿಕೆ ಆಗುತ್ತಿದೆ. ದೇಶದ ಮೊದಲ ಪ್ಲಾಸ್ಮಾ ಬ್ಯಾಂಕ್ ನಾವು ಆರಂಭಿಸಿದ್ದೇವೆ. ಪ್ಲಾಸ್ಮಾ ಥೆರಪಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಕೊರೊನಾ ರೋಗಿಗಳು ಗುಣಮುಖರಾಗುತ್ತಿದ್ದಾರೆ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.


Spread the love

About Laxminews 24x7

Check Also

ಶಿವಾಜಿ ಮಹಾರಾಜರು ದಾರ್ಶನಿಕ ನಾಯಕ : ಪ್ರಧಾನಿ ಮೋದಿ

Spread the loveನವದೆಹಲಿ: ಛತ್ರಪತಿ ಶಿವಾಜಿ ಮಹಾರಾಜರು ದಾರ್ಶನಿಕ ನಾಯಕ, ಅಸಾಧಾರಣ ಆಡಳಿತಗಾರ ಮತ್ತು ಕಾರ್ಯತಂತ್ರದ ಚಿಂತಕ,ಅವರ ಧೈರ್ಯ ಮತ್ತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ