Breaking News

ದೊಣ್ಣೆಗಳನ್ನು ಹಿಡಿದು ಕಾವಲು ಕಾಯುತ್ತಿದ್ದಾರೆಗ್ರಾಮಸ್ಥರು

Spread the love

ಹಾವೇರಿ,- ಮಹಾಮಾರಿ ಕೊರೊನಾ ರಾಜ್ಯದ ಮೂಲೆ ಮೂಲೆಗೂ ಹಬ್ಬುತ್ತಿದ್ದು, ಸೋಂಕಿನಿಂದ ದೂರವಿರಲು ಹಿರೆಕೆರೂರು ತಾಲ್ಲೂಕಿನ ಚಿನ್ನಮುಳಗುಂದ ಗ್ರಾಮಸ್ಥರು ದೊಣ್ಣೆಗಳನ್ನು ಹಿಡಿದು ಸ್ವಯಂಪ್ರೇರಿತ ನಿರ್ಬಂಧ ಹೇರಿಕೊಂಡಿದ್ದಾರೆ.

ನಮ್ಮ ಗ್ರಾಮದಲ್ಲಿ ಯಾವುದೇ ಸೋಂಕಿಲ್ಲ. ಬೇರೆ ಊರಿನವರು ಬಂದು ಸೋಂಕು ಹಬ್ಬಿಸುವುದು ಬೇಡ ಎಂದು ಮುಂಜಾಗ್ರತಾ ಕ್ರಮವಾಗಿ ಗ್ರಾಮಸ್ಥರು ದೊಣ್ಣೆಗಳನ್ನು ಹಿಡಿದು ಕಾವಲು ಕಾಯುತ್ತಿದ್ದಾರೆ. ಈ ಗ್ರಾಮಕ್ಕೆ ಬೇರೆ ಊರುಗಳಿಂದ ಯಾರೂ ಬರುವಂತಿಲ್ಲ, ಯಾರೂ ಹೊರಹೋಗದಂತೆ ನೋಡಿಕೊಳ್ಳುತ್ತಿದ್ದಾರೆ.ಮನೆಗೆ ಒಬ್ಬೊಬ್ಬರು ಇಂತಿಷ್ಟು ಗಂಟೆಗಳ ಲೆಕ್ಕದಲ್ಲಿ ಊರಿನ ಮುಖ್ಯದ್ವಾರದ ಬಗ್ಗೆ ಕಾವಲು ಕಾಯುತ್ತಿದ್ದಾರೆ. ಯಾರಾದರೂ ಬಂದರೆ ಅವರಿಗೆ ಕೊರೊನಾ ಜಾಗೃತಿ ಮೂಡಿಸಿ ವಾಪಸ್ ಕಳುಹಿಸುತ್ತಿದ್ದಾರೆ.


Spread the love

About Laxminews 24x7

Check Also

ಮೆಕ್ಕೆಜೋಳ ರಾಶಿಗೆ ಬೆಂಕಿಯಿಟ್ಟ ಕಿಡಿಗೇಡಿಗಳು – 4 ಲಕ್ಷ ರೂ. ಮೌಲ್ಯದ ಜೋಳ ಸುಟ್ಟು ಭಸ್ಮ

Spread the love ಹಾವೇರಿ: 8 ಎಕರೆ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳದ  ರಾಶಿಗೆ ಕಿಡಿಗೇಡಿಗಳು ಬೆಂಕಿ ಇಟ್ಟ ಪರಿಣಾಮ ಮೆಕ್ಕೆಜೋಳದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ