Breaking News
Home / Uncategorized / ಬೆಳಗಾವಿಯಲ್ಲಿ ಕೊರೊನಾ ಭೀತಿ ನಡುವೆ ಡೆಂಗ್ಯೂಗೆ ಬಾಲಕ ಬಲಿ

ಬೆಳಗಾವಿಯಲ್ಲಿ ಕೊರೊನಾ ಭೀತಿ ನಡುವೆ ಡೆಂಗ್ಯೂಗೆ ಬಾಲಕ ಬಲಿ

Spread the love

ಬೆಳಗಾವಿ, ಜುಲೈ 6: ಕೊರೊನಾ ವೈರಸ್ ಭೀತಿ ನಡುವೆಯೇ ಬೆಳಗಾವಿಯಲ್ಲಿ ಡೆಂಗ್ಯೂ ಪ್ರಕರಣ ಕಾಣಿಸಿಕೊಂಡಿದೆ. ಬೆಳಗಾವಿಯ ವಡಗಾವಿಯ ವಿಷ್ಣು ಗಲ್ಲಿ ನಿವಾಸಿ, 12 ವರ್ಷದ ಬಾಲಕ ಡೆಂಗ್ಯೂಗೆ ಬಲಿಯಾದ್ದಾನೆ
ವರದ್ ಕಿರಣ್ ಪಾಟೀಲ್ (12) ಡೆಂಗ್ಯೂಗೆ ಬಲಿಯಾದ ಬಾಲಕ. ಕೆಎಲ್‌ಎಸ್ ಶಾಲೆಯ ಆರನೇ ತರಗತಿ ವಿದ್ಯಾರ್ಥಿಯಾಗಿದ್ದ ವರದ ಕಳೆದ ಕೆಲವು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಆದರೆ, ನಿನ್ನೆ ಜುಲೈ 5ರಂದು ಸಾವನ್ನಪ್ಪಿದ್ದಾನೆ
ಕೊರೊನಾ ವೈರಸ್ ನಿಂದಾಗಿ ಈಗಾಗಲೇ ಆಸ್ಪತ್ರೆಯಲ್ಲಿ ರೋಗಿಗಳ ಪ್ರವೇಶ ನಿಂತಿದೆ.
ಇದೀಗ ಕಾಣಿಸಿಕೊಂಡಿರುವ ಡೆಂಗ್ಯೂ ಪ್ರಕರಣದ ಕುರಿತು ಪಾಲಿಕೆಯ ಆರೋಗ್ಯ ವಿಭಾಗದ ಕಾರ್ಯವೈಖರಿಯನ್ನು ನಾಗರಿಕರು ಪ್ರಶ್ನಿಸಿದ್ದಾರೆ.

 

ಜಿಲ್ಲಾ ಆರೋಗ್ಯ ಇಲಾಖೆ ಪ್ರಸ್ತುತ ಕೊರೊನಾ ಸೋಂಕಿನತ್ತ ಗಮನ ಹರಿಸುತ್ತಿದ್ದು, ಪಾಲಿಕೆ ಮತ್ತು ಆರೋಗ್ಯ ಇಲಾಖೆ ಡೆಂಗ್ಯೂ ಮುಂತಾದ ಕಾಯಿಲೆಗಳನ್ನು ನಿರ್ಲಕ್ಷಿಸಿದೆ ಎಂದು ಜನರು ದೂರುತ್ತಿದ್ದಾರೆ.


Spread the love

About Laxminews 24x7

Check Also

ಲೋಕಸಭಾ ಚುನಾವಣೆ: ಸಂಜೆ 5 ಗಂಟೆಯವರೆಗೆ ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನ? ಇಲ್ಲಿದೆ ಮಾಹಿತಿ

Spread the loveಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ 2ನೇ ಹಂತದ ಮತದಾನ ನಡೆಯುತ್ತಿದ್ದು, ಮತದಾನ ಪ್ರಕ್ರಿಯೆ ಮುಗಿಯಲು ಕೆಲವೇ ಹೊತ್ತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ