Breaking News

ರಾಜ್ಯಕ್ಕೆ ಗೋವಾ ಅರಣ್ಯ ಸಚಿವರ ಭೇಟಿಕುಮ್ಕಿ ಆನೆ ನೀಡುವಂತೆ ಮನವಿ

Spread the love

ಬೆಂಗಳೂರು: ಗೋವಾ ಅರಣ್ಯ ಸಚಿವ ವಿಶ್ವಜಿತ್ ರಾಣೆ ಅವರು ರಾಜ್ಯ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಅವರನ್ನು ವಿಕಾಸಸೌಧದ ಸಚಿವರ ಕೊಠಡಿಯಲ್ಲಿಂದು ಭೇಟಿಯಾಗಿ ಕುಮ್ಕಿ ಆನೆ ನೀಡುವಂತೆ ಮನವಿ ಮಾಡಿದರು.

ಗೋವಾದಲ್ಲಿ ಪುಂಡಾನೆಗಳ ಹಾವಳಿ ಹೆಚ್ಚಾಗಿದ್ದು, ಕರ್ನಾಟಕದ ಸಹಕಾರ ಕೋರಿದ್ದಾರೆ. ಪುಂಡಾನೆಗಳ ಹಾವಳಿ ನಿಯಂತ್ರಣಕ್ಕೆ ಕುಮ್ಕಿ ಆನೆಗಳನ್ನು ನೀಡುವಂತೆ ಖಂಡ್ರೆ ಅವರಲ್ಲಿ ಮನವಿ ಮಾಡಿದರು. ಈ ಸಂಬಂಧ ಸಚಿವ ಖಂಡ್ರೆ ಪರಿಶೀಲಿಸುವುದಾಗಿ ಭರವಸೆ ನೀಡಿದರು.

ಭೇಟಿ ಬಳಿಕ ಮಾಧ್ಯಮದವರೊಂದಿಗೆ ಜೊತೆ ಮಾತನಾಡಿದ ಗೋವಾ ಸಚಿವ ರಾಣೆ, ಗೋವಾದಲ್ಲಿ ಆನೆಗಳು ಪ್ರವೇಶ ಮಾಡಿವೆ. ಈ ನಿಟ್ಟಿನಲ್ಲಿ ಕಾರ್ಯಾಚರಣೆ ಬಗ್ಗೆ ಚರ್ಚೆ ಮಾಡಿದ್ದೇವೆ. ಎಂಒಯು ಬಗ್ಗೆ ಪರಸ್ಪರ ಚರ್ಚೆಯಾಗಿದೆ ಎಂದರು.

ಇದೇ ವೇಳೆ ಮಹದಾಯಿ ಯೋಜನೆಗೆ ಒಪ್ಪಿಗೆ ನೀಡುವ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ನಮ್ಮ ಮಹಾರಾಷ್ಟ್ರ ಸಿಎಂ ಜೊತೆ ಸಭೆ ಮಾಡಲು ಕ್ರಮ ವಹಿಸಲಾಗುವುದು. ಕ್ರಮವಹಿಸುವ ಬಗ್ಗೆ ಅವರ ಮನವೊಲಿಸ್ತೇವೆ. ಕರ್ನಾಟಕ ರಾಜ್ಯದ ಸಹಕಾರಕ್ಕೆ ಧನ್ಯವಾದಗಳು ಎಂದರು.

ಬಳಿಕ ಮಾತನಾಡಿದ ಸಚಿವ ಈಶ್ವರ್ ಖಂಡ್ರೆ, ಎಲ್ಲಾ ಕಡೆಗಳಲ್ಲಿ ವನ್ಯಜೀವಿಗಳ ಸಮಸ್ಯೆ ಇದೆ. ಸಮಸ್ಯೆ ಬಗೆಹರಿಸಲು ಒಡಂಬಡಿಕೆ ಮಾಡಿಕೊಳ್ತೇವೆ. ಮಹದಾಯಿ ವಿಚಾರದ ಬಗ್ಗೆ ಚರ್ಚೆ ಮಾಡ್ತೇವೆ. ಗೋವಾ, ಮಹಾರಾಷ್ಟ್ರ ಸರ್ಕಾರದ ಜೊತೆ ಮಾತುಕತೆ ನಡೆಸಬೇಕು. ಕಳಸಾ ಬಂಡೂರಿ ಯೋಜನೆಗೆ ಸಹಕರಿಸುವಂತೆ ಚರ್ಚೆ ನಡೆದಿದೆ. ಅಲ್ಲಿನ ಕ್ಯಾಬಿನೆಟ್​ನಲ್ಲಿ ಚರ್ಚಿಸುವಂತೆ ಹೇಳಿದ್ದೇನೆ. ಅವರ ಸಿಎಂ ಜೊತೆ ಮಾತನಾಡಲು ಹೇಳಿದ್ದೇನೆ. ಎರಡು ರಾಜ್ಯಗಳ ಬಾಂಧವ್ಯ ವೃದ್ಧಿಯಾಗಬೇಕು ಎಂದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ