Breaking News

ಕಾಂತಾರ ಚಾಪ್ಟರ್​ 1′ ಟ್ರೈಲರ್ ಬಿಡುಗಡೆ ಬೆನ್ನಲ್ಲೇ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ನಟ ರಿಷಬ್ ಶೆಟ್ಟಿ ದಂಪತಿ​

Spread the love

ಬೈಂದೂರು(ಉಡುಪಿ): ಕಾಂತಾರ ಚಾಪ್ಟರ್​ 1 ಟ್ರೈಲರ್​ ಬಿಡುಗಡೆಯಾಗಿದ್ದು ಭಾರಿ ಸದ್ದು ಮಾಡುತ್ತಿದೆ. ಇದರ ಬೆನ್ನಲ್ಲೇ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದಿದ್ದಾರೆ.

ರಿಷಬ್ ಶೆಟ್ಟಿ ಪತ್ನಿ ಸಹಿತ ಕೊಲ್ಲೂರು ಮೂಕಾಂಬಿಕೆಯ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿ, ಸಿನಿಮಾದ ಯಶಸ್ಸಿಗಾಗಿ ಪ್ರಾರ್ಥಿಸಿದರು. ತಮ್ಮ ಪ್ರತಿ ಸಿನಿಮಾ ಬಿಡುಗಡೆಗೂ ಮುನ್ನ ರಿಷಬ್​ ಅವರು ತಾಯಿ ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸುವುದು ವಾಡಿಕೆ. ಇನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅವರನ್ನು ಗೌರವಿಸಿತು.

ಹುಟ್ಟೂರಲ್ಲೇ ಶೂಟಿಂಗ್​: ಕಾಂತಾರ ಅಧ್ಯಾಯ 1 ಚಿತ್ರದ ಶೂಟಿಂಗ್​ಗಾಗಿ ಕುಂದಾಪುರದಲ್ಲಿ ದೊಡ್ಡ ಸ್ಟುಡಿಯೋ ಮಾಡಿ ಸೆಟ್ ಹಾಕಲಾಗಿತ್ತು. ಸಿನಿಮಾದ ಬಹುತೇಕ ಶೂಟಿಂಗ್​ ಅಲ್ಲಿಯೇ ನಡೆದಿದೆ. ಈಗಾಗಲೇ ಶೂಟಿಂಗ್ ಪೂರ್ತಿ ಆಗಿದ್ದು ಬಿಡುಗಡೆಗೆ ಸಿದ್ಧಗೊಂಡಿದೆ. ಇಂಡೋರ್​, ಔಟ್​ಡೋರ್ ಎಲ್ಲವೂ ಕುಂದಾಪುರದಲ್ಲೇ ಶೂಟ್ ಮಾಡಲಾಗಿದೆ ಎಂದು ರಿಷಬ್ ಶೆಟ್ಟಿ ಮಾಹಿತಿ ನೀಡಿದ್ದಾರೆ.

2022ರಲ್ಲಿ ಬಿಡುಗಡೆಗೊಂಡಿದ್ದ ಕಾಂತಾರ ಸಿನಿಮಾ ಯಶಸ್ಸಿನ ಬಳಿಕ ರಿಷಬ್​ ಶೆಟ್ಟಿಯ ಕಾಂತಾರ ಚಾಪ್ಟರ್​​ 1ರ ಮೇಲಿನ ನಿರೀಕ್ಷೆ ಬೆಟ್ಟದಷ್ಟು ಅಧಿಕವಾಗಿದೆ. ಇಡೀ ಕಾಂತಾರ ತಂಡ ಶ್ರದ್ಧೆಯಿಂದ ಪ್ರೀಕ್ವೆಲ್​ ಕೆಲಸಗಳನ್ನು ಮಾಡಿದೆ. ‘ಕಾಂತಾರ’ ಸಿನಿಮಾಗಿಂತ ಹಿಂದೇನಾಗಿತ್ತು ಎಂಬುದನ್ನು ಈ ಚಿತ್ರದಲ್ಲಿ ಹೇಳಲಾಗುತ್ತಿದೆ. ಈ ಚಿತ್ರಕ್ಕಾಗಿ ಅವರು ಕಲರಿಪಯಟ್ಟು ಕೂಡ ಕಲಿತಿದ್ದಾರೆ ಅನ್ನೋದು ವಿಶೇಷ.


Spread the love

About Laxminews 24x7

Check Also

ಡಾಲ್ಮಿಯಾ ಸಿಮೆಂಟ್ ಕಾರ್ಖಾನೆಯಿಂದ ಯಾದವಾಡ ಬಸವೇಶ್ವರ ಪುತ್ಥಳಿ ನಿರ್ಮಾಣಕ್ಕೆ 16 ಲಕ್ಷ ರೂ. ಮತ್ತು ಕುಲಗೋಡ ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕೆ 10 ಲಕ್ಷ ರೂಪಾಯಿ ದೇಣಿಗೆ*

Spread the love *ಡಾಲ್ಮಿಯಾ ಸಿಮೆಂಟ್ ಭಾರತ ಲಿ.., ಸಮಾಜಮುಖಿ ಕಾರ್ಯಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಫೀದಾ* *ಮೂಡಲಗಿ*- ಸಿಮೆಂಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ