ಜಿಲ್ಲಾ ಪಂಚಾಯತ್ ಕಾರ್ಯಾಲಯ ಬೆಳಗಾವಿ, ಶಾಲಾ ಶಿಕ್ಷಣ ಇಲಾಖೆ ಬೆಳಗಾವಿ ಮತ್ತು ಚಿಕ್ಕೋಡಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿರುವ
“ಬೆಳಗಾವಿ ಜಿಲ್ಲಾ ಟ್ಯಾಲೆಂಟ್ ಸರ್ಚ್ ಪರೀಕ್ಷೆ – ಕನಸುಗಳಿಗೆ ಚಿನ್ನದ ದಾರಿ, ಪ್ರತಿಭೆಗೆ ಹೊಸ ವೇದಿಕೆ – 2025” ರ ಮಾಹಿತಿ ಪತ್ರವನ್ನು ಸಚಿವ ಸತೀಶ್ ಜಾರಕಿಹೊಳಿ ಅವರು ಇಂದು ಗೋಕಾಕ ನಗರದ ಗೃಹಕಚೇರಿಯಲ್ಲಿ ಬಿಡುಗಡೆ ಮಾಡಿದರು
ಜಿಲ್ಲಾ ಪಂಚಾಯತ್ ಬೆಳಗಾವಿ ವತಿಯಿಂದ, ಜಿಲ್ಲೆಯ ಸರಕಾರಿ ಪ್ರೌಢಶಾಲೆಗಳ 9 ಮತ್ತು 10ನೇ ತರಗತಿಯ
ವಿದ್ಯಾರ್ಥಿಗಳಿಗೆ ಉಜ್ವಲ ಭವಿಷ್ಯದ ಬೀಜ ಬಿತ್ತುವ ಉದ್ದೇಶದಿಂದ ಈ ಟ್ಯಾಲೆಂಟ್ ಸರ್ಚ್ ಪರೀಕ್ಷೆಯನ್ನು ವಿಶಿಷ್ಟ ರೀತಿಯಲ್ಲಿ ಆಯೋಜಿಸಲಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆಕರ್ಷಕ ಬಹುಮಾನಗಳನ್ನು ಸಹ ನೀಡಲಾಗುವುದು
Laxmi News 24×7