ಕೋಲಾರ ಜಿಲ್ಲೆಯ ಕೆ.ಜೀ.ಎಫ್ ತಾಲೂಕಿನ ನಲ್ಲೂರು ಮತ್ತು ನತ್ತ ಗ್ರಾಮಗಳ ನಡುವೆ, ಲೋಕೋಪಯೋಗಿ
ಇಲಾಖೆಯ ವತಿಯಿಂದ ನಿರ್ಮಿಸಲಾದ ಪಾಲಾರ್ ನದಿಯ ಮೇಲಿನ ಸೇತುವೆಯ ಉದ್ಘಾಟನೆಯನ್ನು ಇಂದು ಮಾನ್ಯ ಹಿರಿಯ ಸಚಿವರಾದ ಶ್ರೀ ಕೆ. ಎಚ್. ಮುನಿಯಪ್ಪ ಅವರೊಂದಿಗೆ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಕೆ.ಜೀ.ಎಫ್ ಶಾಸಕರಾದ ಶ್ರೀಮತಿ ರೂಪಕಲಾ ಎಂ. ಶಶಿಧರ್, ಬಂಗಾರಪೇಟೆ ಶಾಸಕರಾದ ಶ್ರೀ ಎಸ್. ಎನ್. ನಾರಾಯಣಸ್ವಾಮಿ, ಇಲಾಖೆಯ ಹಿರಿಯ ಅಧಿಕಾರಿಗಳು, ಪಕ್ಷದ ನಾಯಕರು, ಗಣ್ಯರು ಹಾಗೂ ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು.
ಈ ಸೇತುವೆಯ ನಿರ್ಮಾಣದಿಂದ ಪ್ರದೇಶದ ಜನರ ದೀರ್ಘಕಾಲದ ಕನಸು ನನಸಾಗಿದ್ದು, ಸ್ಥಳೀಯ ಸಂಪರ್ಕ ವ್ಯವಸ್ಥೆ ಮತ್ತಷ್ಟು ಬಲಗೊಂಡಿದೆ. ಇದರಿಂದ ಸಾರಿಗೆ ಹಾಗೂ ಆರ್ಥಿಕ ಚಟುವಟಿಕೆಗಳಿಗೆ ಹೊಸ ಚೈತನ್ಯ ಮತ್ತು ವೇಗ ದೊರಕಲಿದೆ.
Laxmi News 24×7