Breaking News

ಕಾರ್ಪೊರೇಟರ್ ಓರ್ವರಿಗೂ ಕೋವಿಡ್-19 ಪಾಸಿಟಿವ್ ದೃಢ……….

Spread the love

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಕಾರ್ಪೊರೇಟರ್ ಓರ್ವರಿಗೂ ಕೋವಿಡ್-19 ಪಾಸಿಟಿವ್ ದೃಢವಾಗಿದೆ.

ಮಂಗಳೂರು ಮಹಾನಗರ ಪಾಲಿಕೆಯ ಕುಂಜತ್ತಬೈಲ್ ದಕ್ಷಿಣ 15ನೇ ವಾರ್ಡಿನ ಕಾರ್ಪೊರೇಟರ್ ಸುಮಂಗಲಾ ರಾವ್ ಅವರಿಗೆ ಇಂದು ಪಾಸಿಟಿವ್ ಪತ್ತೆಯಾಗಿದೆ. ಈ ಬಗ್ಗೆ ಸ್ವತಃ ಸುಂಮಗಲಾ ರಾವ್ ಅವರೇ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಾಕಿದ್ದು, ತಮ್ಮ ಪತಿಗೂ ಪಾಸಿಟಿವ್ ಆಗಿದ್ದು ಗುಣಮುಖರಾಗುತ್ತಿದ್ದೇವೆ ಎಂದಿದ್ದಾರೆ.

https://youtu.be/ZwocKpMtUVY

ಕಳೆದ ಕೆಲ ದಿನದ ಹಿಂದೆ ಕುಂಜತ್ತಬೈಲ್‍ನ ಪ್ರಾಥಮಿಕ ಆರೋಗ್ಯ ಕೇಂದ್ರದ ಸಭೆಯಲ್ಲಿ ಕಾರ್ಪೊರೇಟರ್ ಭಾಗಿಯಾಗಿದ್ದರು. ಇದೇ ಸಭೆಗೆ ಬಂದಿದ್ದ ವ್ಯಕ್ತಿಯೋರ್ವನಿಗೆ ಕೊರೊನಾ ಪಾಸಿಟಿವ್ ದೃಢವಾಗಿತ್ತು. ಈ ಹಿನ್ನಲೆಯಲ್ಲಿ ಕಳೆದ ಏಳು ದಿನಗಳಿಂದ ಕಾರ್ಪೊರೇಟರ್ ಸೆಲ್ಫ್ ಕ್ವಾರಂಟೈನ್ ಆಗಿದ್ದರು. ಇದೀಗ ಅವರ ವರದಿಯಲ್ಲಿ ಕೊರೊನಾ ಸೋಂಕು ಇರುವುದು ಪತ್ತೆಯಾಗಿದೆ.


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ