Breaking News

ನಕಲಿ ನೋಟು ಜಾಲದ 10 ಮಂದಿ ಸೆರೆ

Spread the love

ಬೆಂಗಳೂರು: ನೋಟಿನ ಮಳೆ ಸುರಿಸುವುದಾಗಿ ಅಮಾಯಕರನ್ನು ವಂಚಿಸುತ್ತಿದ್ದ ಜಾಲವನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಯಲಿಗೆಳೆದಿದ್ದಾರೆ.Arrested Accused

ಈ ಹಿಂದೆ ಚಲಾವಣೆಯಿಂದ ಹಿಂಪಡೆಯಲಾದ 2 ಸಾವಿರ ರೂ. ಮುಖಬೆಲೆಯ ಅಸಲಿ ನೋಟುಗಳ ಸೀರೀಸ್‌ ನಂಬರ್ ತಿರುಚಿರುವ ನಕಲಿ ನೋಟುಗಳ ಕುರಿತು ರಿಸರ್ವ್ ಬ್ಯಾಂಕ್‌ ಆಫ್ ಇಂಡಿಯಾ (RBI)ದ ವ್ಯವಸ್ಥಾಪಕರು ನೀಡಿದ್ದ ದೂರಿನನ್ವಯ ತನಿಖೆ ಕೈಗೊಂಡಿದ್ದ ಪೊಲೀಸರು ಮೋಹನ್ ಕೆ, ಶ್ರೀನಿವಾಸ್ ಮೂರ್ತಿ, ರಾಜು, ಬಸವರಾಜ್, ಮುನಿಶಾಮಪ್ಪ, ಮಲ್ಲಿಕಾರ್ಜುನ್, ರಾಮಕೃಷ್ಣ, ಪಳ್ಳಿ ಮುರುಳೀಧರ್, ರಾಮಚಂದ್ರ ಹಾಗೂ ಮುಬಾರಕ್‌ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ.Arrested Accused

ಚಲಾವಣೆಯಿಂದ ಹಿಂಪಡೆಯಲಾದ ಎರಡು ಸಾವಿರ ಮುಖಬೆಲೆಯ 70 ಅಸಲಿ ನೋಟುಗಳ ಸೀರೀಸ್ ನಂಬರ್‌ಗಳನ್ನು ತಿರುಚಿ ಬ್ಯಾಂಕ್‌ಗೆ ಸಲ್ಲಿಕೆಯಾಗಿರುವ ನಕಲಿ ನೋಟುಗಳ ಬಗ್ಗೆ ಹಲಸೂರು ಗೇಟ್ ಠಾಣೆ ಪೊಲೀಸರಿಗೆ ಆರ್‌ಬಿಐ ವ್ಯವಸ್ಥಾಪಕರು ದೂರು ನೀಡಿದ್ದರು. ತನಿಖೆ ಕೈಗೊಂಡ ಪೊಲೀಸರು ಆ ನೋಟುಗಳನ್ನು ಬ್ಯಾಂಕ್‌ಗೆ ಡೆಪಾಸಿಟ್ ಮಾಡಿದ್ದವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆತ ಕಮಿಷನ್ ಆಸೆಗೆ ಕೃತ್ಯ ಎಸಗಿರುವುದು ಬಯಲಾಗಿತ್ತು.

ಸ್ವಾಮೀಜಿಗಳ ವೇಷ ಧರಿಸಿ ಅಮಾಯಕರನ್ನು ಭೇಟಿಯಾಗುತ್ತಿದ್ದ ಬಸವರಾಜ್, ಮಲ್ಲಿಕಾರ್ಜುನ್ ಹಾಗೂ ಮನಿಶಾಮಪ್ಪ 2 ಸಾವಿರ ರೂ. ಮುಖಬೆಲೆಯ ಪ್ರಸ್ತುತ ಚಲಾವಣೆಯಲ್ಲಿರದ ನಿಗದಿತ ಸೀರೀಸ್‌ನ ನೋಟುಗಳನ್ನು (ಉದಾಹರಣೆಗೆ, 2018ನೇ ಸಾಲಿನ ಹೆಚ್ಎಸ್ ಸೀರೀಸ್‌ನ 2 ಸಾವಿರ ಮುಖ ಬೆಲೆಯ 100 ನೋಟುಗಳು) ಕೊಟ್ಟರೆ ಹಣದ ಮಳೆ ಸುರಿಸುವುದಾಗಿ ನಂಬಿಸುತ್ತಿದ್ದರು. ಆ ನೋಟುಗಳು ಸಿಗುವ ಸ್ಥಳವನ್ನೂ ಅವರೇ ಹೇಳುತ್ತಿದ್ದರು.

ನಂಬರ್ ತಿರುಚಿ ಅಂಥ ನೋಟುಗಳನ್ನು ಒದಗಿಸುವ ಕೆಲಸವನ್ನು ಮುಬಾರಕ್ ಮಾಡುತ್ತಿದ್ದ. ಹಣದ ಆಸೆಗೆ ಮೂರರಷ್ಟು ನೀಡಿ ಆ ನೋಟುಗಳನ್ನು ಪಡೆದುಕೊಳ್ಳುತ್ತಿದ್ದ ಅಮಾಯಕರು ಸ್ವಾಮೀಜಿಗಳ ಬಳಿ ಬರುತ್ತಿದ್ದರು. ಆಗ ಒಂದು ಪೂಜೆ ಮಾಡಬೇಕು ಹಾಗೂ ಒಬ್ಬರೇ ಬರಬೇಕೆಂದು ನದಿ, ಕೆರೆಗಳ ಬಳಿ ಕರೆದುಕೊಂಡು ಹೋಗುತ್ತಿದ್ದ ನಕಲಿ ಸ್ವಾಮೀಜಿಗಳು, “ಕೆಲವು ನೋಟುಗಳು ಮುಕ್ಕಾಗಿವೆ, ಅವುಗಳನ್ನು ಹಿಡಿದುಕೊಂಡು ಹೊಳೆಯಲ್ಲಿ ಮುಳುಗಿ ಏಳಬೇಕು” ಎಂದು ಸೂಚಿಸುತ್ತಿದ್ದರು. ನೀರಿನಲ್ಲಿ ಮುಳುಗಿ ಏಳುವಷ್ಟರಲ್ಲಿ ಆ ದುಡ್ಡಿನೊಂದಿಗೆ ನಕಲಿ ಸ್ವಾಮೀಜಿಗಳು ಪರಾರಿಯಾಗುತ್ತಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ