Breaking News

ರೈತನಿಗೆ ಭೂ ಪರಿಹಾರ ಕೊಡದೇ ನಿರ್ಲಕ್ಷ್ಯ: ಕಾರ್ಯಪಾಲಕ ಇಂಜಿನಿಯರ್ ಕಚೇರಿ ಜಪ್ತಿ

Spread the love

ಮಂಡ್ಯ: ರೈತನಿಗೆ ಭೂ ಪರಿಹಾರ ಕೊಡದೇ ಸತಾಯಿಸಿದ ವಿಸಿ ನಾಲಾ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಕಚೇರಿಯನ್ನು ನ್ಯಾಯಾಲಯದ ಆದೇಶದ ಮೇರೆಗೆ ಜಪ್ತಿ ಮಾಡಲಾಗಿದೆ.

ಮದ್ದೂರು ತಾಲೂಕಿನ ಹೆಬ್ಬೆರಳು ಗ್ರಾಮದ ರೈತ ಜವರೇಗೌಡ ಅವರಿಗೆ ಭೂ ಪರಿಹಾರ ಕೊಡದೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದರು. ನೀರಾವರಿ ಇಲಾಖೆ ಅಧಿಕಾರಿಯ ನಿರ್ಲಕ್ಷ್ಯ ಧೋರಣೆಗೆ ಜಪ್ತಿ ಆದೇಶ ನೀಡಿ ಕೋರ್ಟ್ ಚಾಟಿ ಬೀಸಿತ್ತು. ಆದೇಶದಂತೆ ಮಂಗಳವಾರ (ನ.18) ಸರ್ಕಾರಿ ಕಚೇರಿಯಲ್ಲಿನ ಪೀಠೋಪಕರಣಗಳನ್ನು ಜಪ್ತಿ ಮಾಡಲಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಜಪ್ತಿಯಾಗಿರುವ ನಾಲ್ಕನೇ ಸರ್ಕಾರಿ ಕಚೇರಿ ಇದಾಗಿದೆ.

ನಾಲೆಗೆ ಭೂಮಿ ಕಳೆದುಕೊಂಡಿದ್ದ ರೈತನಿಗೆ 84 ಲಕ್ಷ ರೂಪಾಯಿ ಪರಿಹಾರ ಕೊಡದೆ ವಿಳಂಬ ಮಾಡಲಾಗಿತ್ತು. ಗ್ರಾಮದ ಮುತ್ತುರಾಯನಕೆರೆಯ ಪೋಷಕ ನಾಲೆಗೆ ರೈತನ ಸುಮಾರು 1.17ಎಕರೆ ವಶ ಮಾಡಿಕೊಳ್ಳಲಾಗಿತ್ತು. 2020ರಲ್ಲಿ ಕೋರ್ಟ್​ನಿಂದ ಆದೇಶ ಬಂದಿದ್ದರೂ ಪರಿಹಾರ ನೀಡದೇ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರು.

ಈ ಕುರಿತು ರೈತ ಜವರೇಗೌಡ ಮಾಧ್ಯಮದವರೊಂದಿಗೆ ಮಾತನಾಡಿ, 2020ರಲ್ಲಿ ಕೋರ್ಟ್​ನಿಂದ ಪರಿಹಾರ ನೀಡಬೇಕೆಂದು ಆದೇಶ ಬಂದಿದ್ದರೂ, ಪರಿಹಾರ ಕೊಟ್ಟಿಲ್ಲ. ಅದಕ್ಕೆ ಕಚೇರಿ ಜಪ್ತಿ ಮಾಡಲಾಗುತ್ತಿದೆ. 1 ಎಕರೆ 17 ಗುಂಟೆ ಜಮೀನನ್ನು ವಶಪಡಿಸಿಕೊಂಡಿದ್ದರು. ಇದಕ್ಕಾಗಿ 84 ಲಕ್ಷ ರೂಪಾಯಿ ಪರಿಹಾರ ಬರಬೇಕಿತ್ತು. ಕಳೆದ ಐದು ವರ್ಷಗಳಿಂದ ಇಂದು, ನಾಳೆ ಎನ್ನುತ್ತ ಅಧಿಕಾರಿಗಳು ಸಬೂಬು ಹೇಳುತ್ತಿದ್ದರು ಎಂದು ಆರೋಪಿಸಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ