Breaking News

ಬಿಎಂಟಿಸಿ ಬಸ್​ನಿಂದ ಎರಡು ಪ್ರತ್ಯೇಕ ಕಡೆಗಳಲ್ಲಿ ಅಪಘಾತ

Spread the love

ಬೆಂಗಳೂರು: ರಾಜಧಾನಿಯಲ್ಲಿ ಬಿಎಂಟಿಸಿ ಬಸ್​ಗಳಿಂದ ಆಗುತ್ತಿರುವ ಅವಾಂತರ ಮುಂದುವರೆದಿದ್ದು, ಇಂದು ನಗರದ ಎರಡು ಪ್ರತ್ಯೇಕ ಕಡೆಗಳಲ್ಲಿ ಅಪಘಾತ ಸಂಭವಿಸಿದೆ. ಈ ದುರಂತದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಘಟನೆ 1: ನಡೆದುಕೊಂಡು ಹೋಗುತ್ತಿದ್ದ ವೃದ್ಧನಿಗೆ ಡಿಕ್ಕಿ ಹೊಡೆದ ಬಿಎಂಟಿಸಿ ಬಸ್​​​ ಆತನ ತಲೆ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ವೆಂಕಟರಾಮಯ್ಯ (63) ಸಾವನ್ನಪ್ಪಿದ ವೃದ್ಧ. ಬೊಮ್ಮನಹಳ್ಳಿ ರೂಪೇನಾ ಅಗ್ರಹಾರ ನಿವಾಸಿಯಾಗಿದ್ದಾರೆ. ಸೊಪ್ಪು ವ್ಯಾಪಾರ ಮಾಡುತ್ತಿದ್ದ ವೆಂಕಟರಾಮಯ್ಯ ಮಡಿವಾಳ ಮಾರ್ಕೆಟ್​ಗೆ ಸೊಪ್ಪು ಖರೀದಿಸಲು ಬಂದಿದ್ದರು.

ವ್ಯಾಪಾರ ಮುಗಿಸಿಕೊಂಡು 6.30 ಸುಮಾರಿಗೆ ಮನೆಗೆ ನಡೆದುಕೊಂಡು ಹೋಗುತ್ತಿರುವಾಗ ಹಿಂಬದಿಯಿಂದ ಬಂದ ಬಸ್ ಮುಂದೆ ಹೋಗುತ್ತಿದ್ದ ಟಾಟಾ ಏಸ್ ವಾಹನಕ್ಕೆ ಗುದ್ದಿದ ಬಳಿಕ ವೆಂಕಟರಾಮಯ್ಯ ಅವರಿಗೆ ಡಿಕ್ಕಿ ಹೊಡೆದಿದೆ. ಬಸ್​ನ ಚಕ್ರ ವೆಂಕಟರಾಮಯ್ಯ ಮೇಲೆ ಹರಿದ ಪರಿಣಾಮ ಅವರು ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಸೈಂಟ್​ ಜಾನ್ಸ್​ ಆಸ್ಪತ್ರೆಗೆ ರವಾನಿಸಲಾಗಿದೆ. ಬಸ್​ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಘಟನೆ 2- ಬಸ್​ ಚಕ್ರಕ್ಕೆ ಸಿಲುಕಿ ವೃದ್ಧೆ ಸಾವು: ಗೋವಿಂದರಾಜನಗರದ ಸರ್ವಜ್ಞ ಪಬ್ಲಿಕ್ ಶಾಲೆ ಬಳಿ ವೃದ್ಧೆ ಮೇಲೆ ಬಿಎಂಟಿಸಿ ಹರಿದ ಪರಿಣಾಮ ಅವರು ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ 11.30ರ ಸುಮಾರಿಗೆ ನಡೆದಿದೆ. ಸುಶೀಲಾ (61) ಮೃತರು. ಬಸ್​ನಿಂದ ಇಳಿದು ಬಲಭಾಗದ ರಸ್ತೆ ದಾಟುವಾಗ ಆಯತಪ್ಪಿ ಬಿದ್ದ ಪರಿಣಾಮ ಅದೇ ಮಾರ್ಗದಲ್ಲಿ ಬರುತ್ತಿದ್ದ ಬಸ್​ಗೆ ಸಿಲುಕಿದ್ದಾರೆ. ಬಸ್​​ ಚಕ್ರ ವೃದ್ಧೆ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ವಿಜಯನಗರ ಸಂಚಾರ ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ