Breaking News

ಬಿಎಂಟಿಸಿ ಬಸ್​ನಿಂದ ಎರಡು ಪ್ರತ್ಯೇಕ ಕಡೆಗಳಲ್ಲಿ ಅಪಘಾತ

Spread the love

ಬೆಂಗಳೂರು: ರಾಜಧಾನಿಯಲ್ಲಿ ಬಿಎಂಟಿಸಿ ಬಸ್​ಗಳಿಂದ ಆಗುತ್ತಿರುವ ಅವಾಂತರ ಮುಂದುವರೆದಿದ್ದು, ಇಂದು ನಗರದ ಎರಡು ಪ್ರತ್ಯೇಕ ಕಡೆಗಳಲ್ಲಿ ಅಪಘಾತ ಸಂಭವಿಸಿದೆ. ಈ ದುರಂತದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಘಟನೆ 1: ನಡೆದುಕೊಂಡು ಹೋಗುತ್ತಿದ್ದ ವೃದ್ಧನಿಗೆ ಡಿಕ್ಕಿ ಹೊಡೆದ ಬಿಎಂಟಿಸಿ ಬಸ್​​​ ಆತನ ತಲೆ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ವೆಂಕಟರಾಮಯ್ಯ (63) ಸಾವನ್ನಪ್ಪಿದ ವೃದ್ಧ. ಬೊಮ್ಮನಹಳ್ಳಿ ರೂಪೇನಾ ಅಗ್ರಹಾರ ನಿವಾಸಿಯಾಗಿದ್ದಾರೆ. ಸೊಪ್ಪು ವ್ಯಾಪಾರ ಮಾಡುತ್ತಿದ್ದ ವೆಂಕಟರಾಮಯ್ಯ ಮಡಿವಾಳ ಮಾರ್ಕೆಟ್​ಗೆ ಸೊಪ್ಪು ಖರೀದಿಸಲು ಬಂದಿದ್ದರು.

ವ್ಯಾಪಾರ ಮುಗಿಸಿಕೊಂಡು 6.30 ಸುಮಾರಿಗೆ ಮನೆಗೆ ನಡೆದುಕೊಂಡು ಹೋಗುತ್ತಿರುವಾಗ ಹಿಂಬದಿಯಿಂದ ಬಂದ ಬಸ್ ಮುಂದೆ ಹೋಗುತ್ತಿದ್ದ ಟಾಟಾ ಏಸ್ ವಾಹನಕ್ಕೆ ಗುದ್ದಿದ ಬಳಿಕ ವೆಂಕಟರಾಮಯ್ಯ ಅವರಿಗೆ ಡಿಕ್ಕಿ ಹೊಡೆದಿದೆ. ಬಸ್​ನ ಚಕ್ರ ವೆಂಕಟರಾಮಯ್ಯ ಮೇಲೆ ಹರಿದ ಪರಿಣಾಮ ಅವರು ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಸೈಂಟ್​ ಜಾನ್ಸ್​ ಆಸ್ಪತ್ರೆಗೆ ರವಾನಿಸಲಾಗಿದೆ. ಬಸ್​ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಘಟನೆ 2- ಬಸ್​ ಚಕ್ರಕ್ಕೆ ಸಿಲುಕಿ ವೃದ್ಧೆ ಸಾವು: ಗೋವಿಂದರಾಜನಗರದ ಸರ್ವಜ್ಞ ಪಬ್ಲಿಕ್ ಶಾಲೆ ಬಳಿ ವೃದ್ಧೆ ಮೇಲೆ ಬಿಎಂಟಿಸಿ ಹರಿದ ಪರಿಣಾಮ ಅವರು ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ 11.30ರ ಸುಮಾರಿಗೆ ನಡೆದಿದೆ. ಸುಶೀಲಾ (61) ಮೃತರು. ಬಸ್​ನಿಂದ ಇಳಿದು ಬಲಭಾಗದ ರಸ್ತೆ ದಾಟುವಾಗ ಆಯತಪ್ಪಿ ಬಿದ್ದ ಪರಿಣಾಮ ಅದೇ ಮಾರ್ಗದಲ್ಲಿ ಬರುತ್ತಿದ್ದ ಬಸ್​ಗೆ ಸಿಲುಕಿದ್ದಾರೆ. ಬಸ್​​ ಚಕ್ರ ವೃದ್ಧೆ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ವಿಜಯನಗರ ಸಂಚಾರ ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ