ಬೆಂಗಳೂರು,ಜು.10- ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಕಬ್ಬು ಅರೆಯುವಿಕೆ ಸ್ಥಗಿತಗೊಳಿಸಿದ್ದ ಸಹಕಾರಿ ಕ್ಷೇತ್ರದ ರಾಜ್ಯದ ಏಕೈಕ ಸಕ್ಕರೆ ಕಾರ್ಖಾನೆ ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆ (ಪಿಎಸ್ಎಸ್ಕೆ) ಪುನರಾರಂಭಗೊಳ್ಳುವ ಕಾಲ ಸನ್ನಿಹಿತವಾಗಿದ್ದು, ಆ.11ರಂದು ವಿದ್ಯುಕ್ತವಾಗಿ ಕಬ್ಬು ಅರೆಯುವ ಕೆಲಸಕ್ಕೆ ಚಾಲನೆ ಸಿಗಲಿದೆ.
ಕಾರ್ಖಾನೆಯನ್ನು 40 ವರ್ಷಗಳ ಕಾಲ ಗುತ್ತಿಗೆಗೆ ಪಡೆದಿರುವ ಮುರುಗೇಶ್ ನಿರಾಣಿ ಮಾಲೀಕತ್ವದ ನಿರಾಣಿ ಶುಗರ್ಸ್ ಕಂಪನಿಯು ಪಿಎಸ್ಎಸ್ಕೆ ಆರಂಭಕ್ಕೆ ಸಿದ್ಧತೆ ನಡೆಸಿದೆ. ಎಲ್ಲವೂ ನಿರೀಕ್ಷೆಯಂತೆ ನಡೆದರೆ ಆ.11ರಿಂದ ಕಾರ್ಖಾನೆಯಲ್ಲಿ ಕಬ್ಬು ಆರೆಯಲು ಮುಹೂರ್ತ ನಿಗಧಿಯಾಗಲಿದೆ.
ಮಂಡ್ಯ ಜಿಲ್ಲೆಯ ಪಾಂಡವಪುರ ಮತ್ತು ಶ್ರೀರಂಗಪಟ್ಟಣ ವ್ಯಾಪ್ತಿಯ ರೈತರ ಜೀವನಾಡಿಯಾದ ಪಾಂಡವಪುರ ಪಿಎಸ್ಎಸ್ಕೆ ಕಾರ್ಖಾನೆಯನ್ನು ಗುತ್ತಿಗೆ ನೀಡಲಾಗಿದ್ದು, ಟೆಂಡರ್ನಲ್ಲಿ ಮಾಜಿ ಸಚಿವ ಮುರುಗೇಶ್ ನಿರಾಣಿ ಮಾಲೀಕತ್ವದ ಶುಗರ್ಸ್ 40 ವರ್ಷಗಳ ಕಾಲ ಗುತ್ತಿಗೆ ಪಡೆದಿದೆ.
ಕಳೆದ ನಾಲ್ಕೈದು ವರ್ಷಗಳ ಹಿಂದೆ ನಷ್ಟದ ಸುಳಿಗೆ ಸಿಲುಕಿದ್ದ ಕಾರಣ ನೀಡಿ ಈ ಕಾರ್ಖಾನೆಯನ್ನು ಮುಚ್ಚಲಾಗಿತ್ತು. ಇದೀಗ ಕಾರ್ಖಾನೆಯನ್ನು ಪುನಶಚೇತನಗೊಳಿಸಲು ಮುಂದಾಗಿದೆ.
ಸಕ್ಕರೆ ಉತ್ಪಾದನೆಯ ಜೊತೆ ಜೊತೆಗೆ ವಿದ್ಯುತ್, ಈಥನಾಲ್, ರೆಕ್ಟಿಪೈಡ್, ಸಿಒ2, ಸಿಎನ್ಐ, ಸ್ಯಾನಿಟೈಸರ್, ರಸಗೊಬ್ಬರ ಸೇರಿದಂತೆ ಹಲವು ಉಪ ಉತ್ಪನ್ನಗಳ ತಯಾರಿಕೆಗೂ ಒತ್ತು ನೀಡುವ ಉದ್ದೇಶ ಹೊಂದಲಾಗಿದೆ. ರೈತರಿಗೆ ಉಚಿತ ಆರೋಗ್ಯ ತಪಾಸಣೆ, ಜೀವ ವಿಮೆ, ಗ್ರಾಮೀಣ ಕ್ರೀಡಾಕೂಟ, ಉದ್ಯೋಗ ಮೇಳ, ರಿಯಾಯ್ತಿ ದರದಲ್ಲಿ ಅಗತ್ಯ ವಸ್ತುಗಳ ಮಾರಾಟದಂತಹ ಕಾರ್ಯಕ್ರಮಗಳನ್ನ ಹಮ್ಮಿಕೊಂಡಿದೆ.
ಪಿಎಸ್ಎಸ್ಕೆ ವ್ಯಾಪ್ತಿಯಲ್ಲಿ ಬ್ಯಾಂಕ್ ಪ್ರಾರಂಭಿಸುವ ಮೂಲಕ ರೈತರ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡುತ್ತೇವೆ. ಪಿಎಸ್ಎಸ್ಕೆ ಮುನ್ನಡೆಸಿ ಸಕ್ಕರೆ ನಾಡು ಎಂಬ ಹೆಗ್ಗಳಿಕೆಯನ್ನು ಮತ್ತಷ್ಟು ಉತ್ತುಂಗಕ್ಕೆ ಕೊಂಡೊಯ್ಯುವ ಗುರಿ ಇಟ್ಟುಕೊಳ್ಳಲಾಗಿದೆ. ಪಾಂಡವಪುರ ಸಕ್ಕರೆ ಕಾರ್ಖಾನೆಯ ಕಬ್ಬು ಅರೆಯುವಿಕೆ ಸಾಮಥ್ರ್ಯವನ್ನು ಮುಂದಿನ ಐದು ವರ್ಷಗಳಲ್ಲಿ ಈಗಿರುವ 3500 ಟನ್ನಿಂದ 5000 ಟನ್ಗೆ ಹೆಚ್ಚಿಸಲಾಗುವುದು.
5 ಮೆಗಾವ್ಯಾಟ್ನಿಂದ 20 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಗೆ ಕ್ರಿಯಾಯೋಜನೆ ರೂಪಿಸಲಾಗಿದ್ದು, ನಿತ್ಯ 60 ಸಾವಿರ ಲೀಟರ್ ಎಥೆನಾಲ್ ಉತ್ಪಾದಿಸುವ ಡಿಸ್ಟಿಲರಿಯನ್ನು ಆರಂಭಿಸುವುದು, ರೈತರಿಗೆ ಕಾಲ ಕಾಲಕ್ಕೆ ಹಣ ಸಂದಾಯ ಮಾಡುವುದರ ಜೊತೆಗೆ ನಿರುದ್ಯೋಗಿ ಯುವಕ-ಯುವತಿಯರಿಗೆ ತರಬೇತಿ ನೀಡಿ ಉದ್ಯೋಗ ನೀಡುವ ಮೂಲಕ ಆರ್ಥಿಕ ಮಟ್ಟವನ್ನು ಹೆಚ್ಚಿಸುವುದು.
https://www.facebook.com/105350550949710/posts/180022430149188/?sfnsn=wiwspwa&extid=0vMLgdI3TPQQ0e5X&d=w&vh=e