ಬೆಳಗಾವಿಯ ಡಾಕ್ಟರ್ ಶಿವಸ್ವಾಮಿ ಮುಡಿಗುಂಡ ಅವರಿಗೆ ‘ಕಾಚ್ ಸಮುದಾಯ ಚಾಂಪಿಯನ್ ಪ್ರಶಸ್ತಿ’ ಪ್ರದಾನ!
ಸಚಿವ ಶರಣ್ ಪ್ರಕಾಶ್ ಪಾಟೀಲ್ ಅವರಿಂದ ಪ್ರದಾನ.
ನವೆಂಬರ್ 21ರಂದು ಕಲಬುರಗಿಯ ಜಿಐಎಂಎಸ್’ನಲ್ಲಿ ಪ್ರಶಸ್ತಿ.
ಬೆಳಗಾವಿಯ ಕೆಎಹೆಚ್ಇಆರ್ ಡೀಮ್ಡ್ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿರುವ ಜೆ.ಎನ್. ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕರಾದ ಶಿವಸ್ವಾಮಿ ಎಸ್. ಮುಡಿಗುಂಡ ಅವರಿಗೆ ಪ್ರತಿಷ್ಠಿತ ‘ಕಾಚ್ ಸಮುದಾಯ ಚಾಂಪಿಯನ್ ಪ್ರಶಸ್ತಿ’ ನೀಡಿ ಗೌರವಿಸಲಾಗಿದೆ.
ಕಲಬುರಗಿಯ ಜಿಐಎಂಎಸ್ನಲ್ಲಿ ನವೆಂಬರ್ 21, 2025 ರಂದು ನಡೆದ ‘ಕರ್ನಾಟಕ ಸಮುದಾಯ ಆರೋಗ್ಯ ಸಂಘ’ 2025 ರ 35 ನೇ ರಾಜ್ಯ ಸಮ್ಮೇಳನದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಶಿವಸ್ವಾಮಿ ಮುಡಿಗುಂಡ ಅವರು ಸಮುದಾಯ ಆರೋಗ್ಯ ಕ್ಷೇತ್ರದಲ್ಲಿ ಮಾಡಿದ ಮಹತ್ವದ ಸೇವೆಗಾಗಿ ಈ ಗೌರವಕ್ಕೆ ಪಾತ್ರರಾಗಿದ್ದಾರೆ.
ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವರಾದ ಗೌರವಾನ್ವಿತ ಶರಣ್ ಪ್ರಕಾಶ್ ಪಾಟೀಲ್ ಅವರು ಪ್ರಶಸ್ತಿಯನ್ನು ವಿತರಿಸಿದರು. ಸಮುದಾಯ ಮತ್ತು ಸಾರ್ವಜನಿಕ ಆರೋಗ್ಯ ಕ್ಷೇತ್ರಗಳಲ್ಲಿ ಶಿವಸ್ವಾಮಿ ಮುಡಿಗುಂಡ ಅವರು ಸಲ್ಲಿಸಿದ ಕೊಡುಗೆಗಳನ್ನು ಈ ಸಂದರ್ಭದಲ್ಲಿ ಸ್ಮರಿಸಲಾಯಿತು. ಈ ಪ್ರಶಸ್ತಿಯು ಬೆಳಗಾವಿಯ ವೈದ್ಯಕೀಯ ಶಿಕ್ಷಣ ಕ್ಷೇತ್ರಕ್ಕೆ ಮತ್ತು ಜೆ.ಎನ್. ವೈದ್ಯಕೀಯ ಕಾಲೇಜಿಗೆ ಮತ್ತೊಂದು ಹೆಮ್ಮೆಯ ಗರಿಯಾಗಿದೆ.
Laxmi News 24×7