Breaking News

ನೀರಿನ‌ ಬಿಲ್ ಬಾಕಿ ಉಳಿಸಿಕೊಂಡ ಬೆಂಗಳೂರಿಗರಿಗೆ ಸಿಹಿ ಸುದ್ದಿ

Spread the love

ಬೆಂಗಳೂರು: ಬೆಂಗಳೂರಲ್ಲಿ ನೀರಿನ ಬಿಲ್ ಕಟ್ಟದೇ ಬಾಕಿ ಉಳಿಸಿಕೊಂಡ ಗ್ರಾಹಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಗ್ರಾಹಕರು ನೀರಿನ ಬಾಕಿ ಅಸಲು ಮೊತ್ತವನ್ನು ಏಕಕಾಲದಲ್ಲಿ ಪಾವತಿಸಿದರೆ ಬಡ್ಡಿ, ದಂಡ ಮತ್ತು ಇತರೆ ಶುಲ್ಕಗಳನ್ನು ಶೇ.100ರಷ್ಟು ಮನ್ನಾ ಮಾಡುವ ಏಕಕಾಲಿಕ ತೀರುವಳಿ ಯೋಜನೆ(OTS)ಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.

ಮೂರು ತಿಂಗಳ ಅವಧಿಗೆ ಏಕಕಾಲಿಕ ತೀರುವಳಿ ಯೋಜನೆ ಜಾರಿ ಮಾಡಲು ತೀರ್ಮಾನ ಮಾಡಲಾಗಿದೆ‌. Bengaluru Water Supply Regulations, 1965ರ ನಿಯಮಾವಳಿಗಳನ್ನು ಸಡಿಲಿಸಿ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಗ್ರಾಹಕರು ಪಾವತಿಸಲು ಬಾಕಿಯಿರುವ ನೀರಿನ ಬಿಲ್ಲಿನ ಸಂಬಂಧ ಏಕಕಾಲಿಕ ಸೆಟಲ್‌ಮೆಂಟ್ (One Time Settlement) ಯೋಜನೆಯನ್ನು ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದರು.

ಸರ್ಕಾರದ ವಿವಿಧ ಇಲಾಖೆಗಳಲ್ಲಿ ಬಾಕಿಯಿರುವ ಮೊತ್ತಗಳನ್ನು ಲೆಕ್ಕ ಪತ್ರದಲ್ಲಿ ಸಮನ್ವಯಗೊಳಿಸಲು ಸಚಿವ ಸಂಪುಟ ನಿರ್ಣಯಿಸಲಾಗಿದೆ.‌ ಫೆಬ್ರವರಿ 2025ರ ವರೆಗೆ ಗ್ರಾಹಕರು ಉಳಿಸಿಕೊಂಡಿರುವ ನೀರಿನ ಬಾಕಿ ಮೊತ್ತವು ಒಟ್ಟು 701.71 ಕೋಟಿ ರೂ.ಗಳಿದ್ದು, ಈ ಮೊತ್ತದಲ್ಲಿ ಅಸಲು ಮೊತ್ತವು 439.03 ಕೋಟಿ ರೂ.ಗಳು ಹಾಗೂ ಬಾಕಿಯಿರುವ ಬಡ್ಡಿ ಮೊತ್ತವು 262.68 ಕೋಟಿ ರೂ.ಗಳಾಗಿದೆ. ಈ ಯೋಜನೆಗೆ 03 ತಿಂಗಳ ಕಾಲಮಿತಿ ನಿಗದಿಗೊಳಿಸಿ. ಏಕಕಾಲಿಕ ಸೆಟಲ್‌ಮೆಂಟ್ (One Time Settlement-OTS) ಯೋಜನೆ ಯನ್ನು ಕಾರ್ಯಗತಗೊಳಿಸಿದಲ್ಲಿ, ಗ್ರಾಹಕರಿಂದ ಬಾಕಿಯಿರುವ ನೀರಿನ ಅಸಲು ಬಿಲ್ಲಿನ ಮೊತ್ತವನ್ನು ಪಾವತಿಸಿಕೊಳ್ಳುವುದರಿಂದ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಗೆ ಆರ್ಥಿಕ ಸಂಪನ್ಮೂಲ ಕ್ರೋಢಿಕರಿಸಬಹುದಾಗಿದ್ದು, ಸಾರ್ವಜನಿಕರಿಗೂ ಸಹ ಅಸಲು ಮೊತ್ತದ ಮೇಲಿನ ಬಡ್ಡಿ ಕಟ್ಟುವುದರಿಂದ ವಿನಾಯಿತಿ ದೊರಕಲಿದೆ.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ