ಎಂಎಲ್ಎ ಕಾರು ಡ್ರೈವರ್ ಅಪಘಾತದಲ್ಲಿ ಸಾವು; ಶಾಸಕ ಮಹೇಶ ಟೆಂಗಿನಕಾಯಿ ಕಣ್ಣೀರು
ಹುಬ್ಬಳ್ಳಿ: ಮಗಳು ಹುಟ್ಟುಹಬ್ಬಕ್ಕೆಂದು ಹೋಗುತ್ತಿದ್ದ ಬಿಜೆಪಿ ಎಂಎಲ್ಎ ಮಹೇಶ ಟೆಂಗಿನಕಾಯಿ ಅವರ ಕಾರು ಚಾಲಕ ಮಂಜುನಾಥ,

ಬೈಕ್ ಸ್ಕಿಡ್ ಆಗಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಶಾಸಕ ಮಹೇಶ ಟೆಂಗಿನಕಾಯಿ ಅವರು, ತಮ್ಮ ಕಾರು ಚಾಲಕನನ್ನು ನೆನೆದು ಬಿಕ್ಕಿ ಬಿಕ್ಕಿ ಅಳುತ್ತ ಕಣ್ಣೀರು ಹಾಕಿದರು.
ಶಾಸಕ ಮಹೇಶ ಟೆಂಗಿನಕಾಯಿ ಅವರ ಕಾರು ಚಾಲಕ ಮಂಜುನಾಥ ಅವರು ತಮ್ಮ ಮಗಳ ಹುಟ್ಟುಹಬ್ಬಕ್ಕೆಂದು ಊರಿಗೆ ತೆರಳುತ್ತಿರುವಾಗ, ಹುಬ್ಬಳ್ಳಿ ತಾಲ್ಲೂಕಿನ ನೂಲ್ವಿ ಗ್ರಾಮದ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದು, ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದರು.
ಕೂಡಲೇ ಶಾಸಕ ಟೆಂಗಿನಕಾಯಿ ತಮ್ಮ ಎಲ್ಲ ಕಾರ್ಯಕ್ರಮಗಳನ್ನು ರದ್ದು ಮಾಡಿ, ತಮ್ಮ ಚಾಲಕನನ್ನು ನೆನೆದು ಕಣ್ಣೀರು ಹಾಕಿ, ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
Laxmi News 24×7