Home / ಜಿಲ್ಲೆ / ಬೆಳಗಾವಿ / ನಿಪ್ಪಾಣಿಯಲ್ಲಿರುವ ನೂತನ ಪ್ರವಾಸಿ ಮಂದಿರದ ಉದ್ಘಾಟನಾ ಸಮಾರಂಭ

ನಿಪ್ಪಾಣಿಯಲ್ಲಿರುವ ನೂತನ ಪ್ರವಾಸಿ ಮಂದಿರದ ಉದ್ಘಾಟನಾ ಸಮಾರಂಭ

Spread the love

ಬೆಳಗಾವಿ: ನಿಯಮಗಳನ್ನು ಪಾಲಿಸಿ ಜನರಿಗೆ ಮಾದರಿಯಾಗಬೇಕಿರುವ ನಮ್ಮ ನಾಯಕರು ನಿಯಮಗಳನ್ನು ಮುರಿಯುತ್ತಿದ್ದಾರೆ. ಇಂಥದ್ದೇ ಒಂದು ಘಟನೆ ಜಿಲ್ಲೆಯ ನಿಪ್ಪಾಣಿಯಲ್ಲಿ ನಡೆದಿದೆ.

ನಿಪ್ಪಾಣಿಯಲ್ಲಿರುವ ನೂತನ ಪ್ರವಾಸಿ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಇಂದು ಉಪಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ ಹಾಗೂ ಗೋವಿಂದ ಕಾರಜೋಳ ಪಾಲ್ಗೊಂಡಿದ್ದರು. ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾಸಾಹೇಬ್​ ಜೊಲ್ಲೆ ಸಹ ಉಪಸ್ಥಿತರಿದ್ದರು.

ಇದೇ ವೇಳೆ ಸಮಾರಂಭದಲ್ಲಿ ಅಧಿಕಾರಿಗಳು ಸೇರಿದಂತೆ 100ಕ್ಕೂ ಹೆಚ್ಚು ಜನರು ಸಹ ಭಾಗಿಯಾಗಿದ್ದರು. ಜೊತೆಗೆ, ಸಾಮಾಜಿಕ ಅಂತರವನ್ನೂ ಸಹ ಪಾಲಿಸಲಿಲ್ಲ. ಹಾಗಾಗಿ, ಜನರಿಗೆ ನಿಯಮಗಳನ್ನು ಪಾಲಿಸಲು ಕಿವಿಮಾತು ಹೇಳುವ ನಾಯಕರೇ ನಿಯಮಗಳನ್ನು ಮುರಿಯುವುದು ಎಷ್ಟು ಸರಿ ಎಂದು ಸ್ಥಳೀಯರು ಪ್ರಶ್ನಿಸಿದ್ದಾರೆ.


Spread the love

About Laxminews 24x7

Check Also

ಆಡಳಿತದಲ್ಲಿ ಪಾರದರ್ಶಕತೆ ಕೊರತೆ: ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ದೇಶಪಾಂಡೆ ಬೇಸರ

Spread the love ಬೆಳಗಾವಿ: ‘ಸರ್ಕಾರಿ ಯೋಜನೆಗಳ ಪ್ರಯೋಜನ ದೊರೆಯಬೇಕಾದರೆ ಆಡಳಿತದಲ್ಲಿ ಸುಧಾರಣೆ ಅತ್ಯಗತ್ಯ. ಇತ್ತೀಚೆಗೆ ಆಡಳಿತದಲ್ಲಿ ಸಾಕಷ್ಟು ಸುಧಾರಣೆಯಾಗಿದ್ದರೂ‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ