ಕೈ ಕಾರ್ಯಕರ್ತನ ಕುಟುಂಬಕ್ಕೆ 25 ಲಕ್ಷ ಪರಿಹಾರ ವಿತರಿಸಿದ ಸಚಿವ ಜಮೀರ್ ವಿರುದ್ಧ ಐಟಿಗೆ ದೂರು
ಬೆಂಗಳೂರು: ಬ್ಯಾನರ್ ವಿಚಾರವಾಗಿ ಬಳ್ಳಾರಿಯಲ್ಲಿ ನಡೆದ ಗುಂಡಿನ ದಾಳಿಗೆ ಬಲಿಯಾಗಿದ್ದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಕುಟುಂಬಕ್ಕೆ ಪರಿಹಾರ ರೂಪದಲ್ಲಿ 25 ಲಕ್ಷ ರೂ. ನಗದು ವಿತರಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ವಿರುದ್ಧ ಆದಾಯ ತೆರಿಗೆ ಇಲಾಖೆಗೆ ದೂರು ಸಲ್ಲಿಕೆಯಾಗಿದೆ.
ಹಿಂದೂ ಮುಖಂಡ ತೇಜಸ್ಗೌಡ ಎಂಬುವರು ಜಮೀರ್ ಅಹಮದ್ ವಿರುದ್ಧ ಐಟಿ ಇಲಾಖೆಗೆ ದೂರು ನೀಡಿದ್ದಾರೆ. ಆರ್ಬಿಐ ನಿಯಮದ ಪ್ರಕಾರ 2 ಲಕ್ಷಕ್ಕಿಂತ ಹೆಚ್ಚು ಹಣ ನಗದು ಇಟ್ಟುಕೊಳ್ಳುವುದು ಅಥವಾ ವಹಿವಾಟು ಮಾಡುವುದು ಕಾನೂನುಬಾಹಿರ. ಒಂದು ವೇಳೆ ಹಣ ಇಟ್ಟುಕೊಂಡಿದ್ದರೆ ಸೂಕ್ತ ದಾಖಲಾತಿ ಇರಬೇಕು. ಹೀಗಾಗಿ, ಈ ಹಣದ ಮೂಲದ ಬಗ್ಗೆ ದೂರು ದಾಖಲಿಸಿಕೊಂಡು ತನಿಖೆ ನಡೆಸಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.
Laxmi News 24×7