Breaking News

ಸಚಿವ ಸಿ.ಟಿ.ರವಿ ಅವರಿಗೆ ಕೊರೊನಾ ಸೋಂಕು

Spread the love

ಬೆಂಗಳೂರು: ಸಚಿವ ಸಿ.ಟಿ.ರವಿ ಅವರಿಗೆ ಕೊರೊನಾ ಸೋಂಕು ತಗುಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ.

ಸಂಸದೆ ಸುಮಲತಾ ಅಂಬರೀಶ್, ಶಾಸಕರಾದ ಪ್ರಾಣೇಶ್, ಅಜೇಯ್ ಸಿಂಗ್, ಪುಟ್ಟಣ್ಣಯ್ಯ ಸೇರಿದಂತೆ ಹಲವು ಜನಪ್ರತಿನಿಧಿಗಳಿಗೆ ಕೊರೊನಾ ತಗುಲಿದೆ. ಎಲ್ಲರೂ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಆದಷ್ಟು ಬೇಗ ಗುಣಮುಖರಾಗಿ ಬರುತ್ತೇವೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ.

ಈ ಹಿಂದೆಯೂ ಕೊರೊನಾ ಪರೀಕ್ಷೆಗೆ ಒಳಗಾಗಿದ್ದ ಸಿ.ಟಿ.ರವಿ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದರು. ನೆಗೆಟಿವ್ ವರದಿ ಬಂದ ಬಳಿಕ ಕೆಲಸಗಳಲ್ಲಿ ತೊಡಗಿಕೊಂಡಿದ್ದರು. ಇತ್ತ ಸಿಎಂ ಬಿ.ಎಸ್.ಯಡಿಯೂರಪ್ಪ ಸಹ ಕೊರೊನಾ ಆತಂಕದ ಹಿನ್ನೆಲೆ ಸೆಲ್ಫ್ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ