Breaking News

ಇಂದು ಒಂದೇ ದಿನ ರಾಜ್ಯದಲ್ಲಿ 2798 ಜನರಿಗೆ ಸೋಂಕು………..

Spread the love

ಬೆಂಗಳೂರು – ರಾಜ್ಯದಲ್ಲಿ ಕೊರೋನಾ ದಿನದಿಂದ ದಿನಕ್ಕೆ ಹೆಚ್ಚುತ್ತ ಸಾಗುತ್ತಿದ್ದು, ಇಂದು ಒಂದೇ ದಿನ ರಾಜ್ಯದಲ್ಲಿ 2798 ಜನರಿಗೆ ಸೋಂಕು ದೃಢಪಟ್ಟಿದೆ.

ಬೆಂಗಳೂರಿನಲ್ಲಿ 1533 ಜನರಿಗೆ ಸೋಂಕು ತಗುಲಿದೆ. ಇಂದು ಒಟ್ಟೂ 70 ಜನರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ 23 ಜನರು ಸಾವಿಗೀಡಾಗಿದ್ದಾರೆ.

ಈ ಮಧ್ಯೆ ಮಂಗಳವಾರ ರಾತ್ರಿಯಿಂದ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಒಂದು ವಾರ ಲಾಕ್ ಡೌನ್ ಮಾಡಲು ಸರಕಾರ ನಿರ್ಧರಿಸಿದೆ.  ಇಡೀ ರಾಜ್ಯಕ್ಕೆ ಲಾಕ್ ಡೌನ್ ಮಾಡಬೇಕೋ ಬೇಡವೋ ಎನ್ನುವ ಕುರಿತು ಇನ್ನೂ ನಿರ್ಧಾರವಾಗಿಲ್ಲ. ಈ ಬಗ್ಗೆ ಸೋಮವಾರ ಘೋಷಣೆ ಸಾಧ್ಯತೆ ಇದೆ.

 

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 8 ಜನ ಬೆಂಗಳೂರಿನ ಉಸ್ತುವಾರಿಗಳ ಜೊತೆ ಚರ್ಚಿ ನಡೆಸಿದ್ದಾರೆ. ಚರ್ಚೆಯ ನಂತರ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯಲ್ಲಿ ಲಮಂಗಳವಾರ ರಾತ್ರಿ 8 ಗಂಟೆಯಿಂದ ಲಾಕ್ ಡೌನ್ ಬಗ್ಗೆ ಘೋಷಿಸಿದ್ದಾರೆ.

ರಾಜ್ಯ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಅವರಿಗೂ ಕೊರೋನಾ ಪಾಸಿಟಿವ್ ಬಂದಿದೆ.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ