ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯ್ಲಿ ರಾಜ್ಯ ಸರ್ಕಾರವು ಭಾನುವಾರ ಸಂಪೂರ್ಣ ಲಾಕ್ ಡೌನ್ ಗೆ ಸೂಚನೆ ನೀಡಿದೆ.
ಈ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗಿನ ಜಾವ 5 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿರಲಿದೆ.
ಈಗಾಗಲೇ ಪ್ರತಿದಿನ ರಾತ್ರಿ 8 ಗಂಟೆಯಿಂದ ಬೆಳಗಿನ ಜಾವ 5 ಗಂಟೆಯವರೆಗೆ ಕರ್ಪ್ಯೂ ಜಾರಿಯಲ್ಲಿದೆ. ಲಾಕ್ ಡೌನ್ ವೇಳೆ ಸುಖಾಸುಮ್ಮನೆ ಮನೆಯಿಂದ ಹೊರಬಂದರೆ ಮುಲಾಜಿಲ್ಲದೆ ಪೊಲೀಸರು ಕೇಸ್ ದಾಖಲಿಸಿ ದಂಡ ವಿಧಿಸಲಿದ್ದಾರೆ. ಸರಕು ಸಾಗಣಿ ಮತ್ತು ತುರ್ತು ಸೇವೆ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶವಿರಲಿದೆ.
ಏನಿರುತ್ತೆ?
ಆಸ್ಪತ್ರೆ , ಮೆಡಿಕಲ್ ಶಾಪ್ , ದಿನಸಿ ಅಂಗಡಿ , ಹೋಟೆಲ್ ನಲ್ಲಿ ಪಾರ್ಸೆಲ್ , ತರಕಾರಿ ಅಂಗಡಿ , ಮಾಂಸದಂಗಡಿ , ಹಾಲು ಮತ್ತು ಪೊಲೀಸ್ , ವೈದ್ಯಕೀಯ ಮಾಧ್ಯಮ ಸೇವೆ ಸಿಗಲಿದೆ .
ಏನಿರಲ್ಲ ?
ಕೆಎಸ್ ಆರ್ ಟಿಸಿ , ಕ್ಯಾಬ್ , ಆಟೋ ಸೇವೆ ಇರುವುದಿಲ್ಲ , ಜೊತೆಗ ವಾಣಿಜ್ಯ ಮಳಿಗೆ ಇನ್ನಿತರ ಅಂಗಡಿಗಳು ಸಂಪೂರ್ಣ ಬಂದ್ ಆಗಿರಲಿವೆ .