Breaking News

–ಗೋಕಾಕ–ಯರಗಟ್ಟಿ ರಾಜ್ಯ ಹೆದ್ದಾರಿಯ ಲೋಳಸೂರ ಗ್ರಾಮದ ಸಮೀಪ ಘಟಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸಲಿರುವ ನೂತನ ಸೇತುವೆ ಕಾಮಗಾರಿಗೆ ಶಂಕುಸ್ಥಾಪನೆ

Spread the love

ಸಂಕೇಶ್ವರ–ಗೋಕಾಕ–ಯರಗಟ್ಟಿ ರಾಜ್ಯ ಹೆದ್ದಾರಿಯ ಲೋಳಸೂರ ಗ್ರಾಮದ ಸಮೀಪ ಘಟಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸಲಿರುವ ನೂತನ ಸೇತುವೆ ಕಾಮಗಾರಿಗೆ ಇಂದು ಶಂಕುಸ್ಥಾಪನೆ ನೆರವೇರಿಸಲಾಯಿತು.
ಲೋಕೋಪಯೋಗಿ ಇಲಾಖೆಯ ಸಚಿವರಾದ ಶ್ರೀ ಸತೀಶ ಜಾರಕಿಹೊಳಿಯವರ ವಿಶೇಷ ಆಸಕ್ತಿ ಹಾಗೂ ಪ್ರಯತ್ನದಿಂದ ಅಂದಾಜು ರೂ. 43.00 ಕೋಟಿ ವೆಚ್ಚದಲ್ಲಿ ಮಂಜೂರಾದ ಈ ಮಹತ್ವದ ಕಾಮಗಾರಿಯನ್ನು ಶಾಸಕರಾದ ಶ್ರೀ ಬಾಲಚಂದ್ರ ಜಾರಕಿಹೊಳಿ ಅವರೊಂದಿಗೆ ಸೇರಿ ಇಂದು ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರು, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು, ಸುತ್ತಮುತ್ತಲಿನ ಗ್ರಾಮಗಳ ಪ್ರಮುಖರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಈ ನೂತನ ಸೇತುವೆ ನಿರ್ಮಾಣದಿಂದ ಸಂಚಾರ ಸೌಲಭ್ಯ ಮತ್ತಷ್ಟು ಸುಧಾರಿಸಿ, ಸ್ಥಳೀಯ ಗ್ರಾಮಸ್ಥರು ಹಾಗೂ ಸಾರ್ವಜನಿಕರಿಗೆ ಮಹತ್ತರ ಅನುಕೂಲವಾಗಲಿದೆ.

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ