Breaking News

ಮಹಾಂತೇಶ್​​ ಬೀಳಗಿ ಪುತ್ರಿಗೆ ಅನುಕಂಪದ ನೌಕರಿ

Spread the love

ಬೆಂಗಳೂರು: ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಕಾರು ಅಪಘಾತದಲ್ಲಿ ಮೃತಪಟ್ಟಿದ್ದ ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ, ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಪುತ್ರಿ ಚೈತನ್ಯಾ ಬೀಳಗಿಗೆ ಅನುಕಂಪದ ಆಧಾರದಲ್ಲಿ ಕೆಲಸ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ. ಕರ್ನಾಟಕ ಸರ್ಕಾರದ ಸಚಿವಾಲಯದಲ್ಲಿ ಉದ್ಯೋಗ ನೀಡಲಾಗಿದ್ದು, ಜ.2ರಂದು ಸಿಎಂ ನೇತೃತ್ವದಲ್ಲಿ ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ ಅನುಕಂಪದ ಉದ್ಯೋಗ ನೀಡಲು ನಿರ್ಧರಿಸಲಾಗಿತ್ತು.

ಭಾರತೀಯ ಆಡಳಿತ ಸೇವೆಗೆ ಸೇರಿದ ಅಧಿಕಾರಿಯಾದ ದಿವಂಗತ ಮಹಾಂತೇಶ್ ಬೀಳಗಿ ಅವರು ಸೇವೆಯಲ್ಲಿರುವಾಗಲೇ 2025ರ ನವೆಂಬರ್​​ 25ರಂದು ನಿಧನ ಹೊಂದಿರುವುದರಿಂದ, ಇವರ ಪುತ್ರಿಯಾದ ಚೈತನ್ಯಾ ಎಮ್. ಬೀಳಗಿ, ಇವರನ್ನು ಕರ್ನಾಟಕ ನಾಗರೀಕ ಸೇವಾ (ಅನುಕಂಪದ ಆಧಾರದ ಮೇಲೆ ನೇಮಕಾತಿ) ನಿಯಮಗಳು, 1996ರ ನಿಯಮ 6(1)ರನ್ವಯ ಕರ್ನಾಟಕ ಸರ್ಕಾರ ಸಚಿವಾಲಯದಲ್ಲಿ ಸಹಾಯಕ ಹುದ್ದೆಗೆ ಎರಡು ವರ್ಷಗಳ ಪರೀಕ್ಷಾರ್ಥಾವಧಿಯ ಮೇರೆಗೆ ಹಾಗೂ ಷರತ್ತುಗಳಿಗೆ ಒಳಪಟ್ಟು ಅನುಕಂಪದ ಆಧಾರದ ಮೇಲೆ ನೇಮಕ ಮಾಡಲಾಗಿರೋದಾಗಿ ತಿಳಿಸಲಾಗಿದೆ. 15 ದಿನಗಳ ಒಳಗೆ ಕೆಲಸಕ್ಕೆ ಹಾಜರಾಗುವಂತೆಯೂ ಸೂಚಿಸಲಾಗಿದೆ.

ನವೆಂಬರ್ 25ರಂದು ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್​​ ಬಳಿ ಕಾರು ಅಪಘಾತ ನಡೆದು ಮಹಾಂತೇಶ ಬೀಳಗಿ ಮೃತಪಟ್ಟಿದ್ದರು. ಏಕಾಏಕಿ ಅಡ್ಡ ಬಂದ ಶ್ವಾನವನ್ನು ಚಾಲಕ ಉಳಿಸಲು ಹೋದ ಪರಿಣಾಮ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಅಪಘಾತಕ್ಕೀಡಾಗಿತ್ತು. ಈ ವೇಳೆ ಮಹಾಂತೇಶ್ ಬಿಳಗಿ ಸೇರಿದಂತೆ ಸೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಕೂಡ ಮೃತಪಟ್ಟಿದ್ದರು.


Spread the love

About Laxminews 24x7

Check Also

ಜಿಬಿಎ ಚುನಾವಣೆಗೆ ಕಾಂಗ್ರೆಸ್ ಆಕಾಂಕ್ಷಿಗಳ ಪಟ್ಟಿ ಏರಿಕೆ – 369 ವಾರ್ಡ್‌ಗೆ 1,800 ಆಕಾಂಕ್ಷಿಗಳಿಂದ ಅರ್ಜಿ ಸ್ವೀಕಾರ

Spread the loveಬೆಂಗಳೂರು: ಜಿಬಿಎ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ಸಿದ್ಧತೆ ಮಾಡುತ್ತಿದೆ. 369 ವಾರ್ಡ್‌ಗಳ 1,800 ಅರ್ಜಿ ಸೇಲ್ ಆಗಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ