Breaking News

ಡಾ. ಸಿದ್ದರಾಮಯ್ಯನವರಿಗೆ ಸಂಗೀತ ರತ್ನ ಪ್ರಶಸ್ತಿ

Spread the love

ಬಾಗಲಕೋಟೆ : ಬಿ.ವಿ.ವಿ. ಸಂಘದ ಕಲಾ ಮಹಾವಿದ್ಯಾಲಯದ ವಿಶ್ರಾಂತ ಪ್ರಾಧ್ಯಪಕ ಮತ್ತು ನಾಡಿನ ಹಿಂದೂಸ್ತಾನಿ ಸಂಗೀತಗಾರರಾದ ಡಾ. ಪಂಡಿತ ಸಿದ್ದರಾಮಯ್ಯ ಮಠಪತಿ ( ರುದ್ರಮಠ ) ಗೊರಟಾ ಅವರಿಗೆ ಬೀದರ ಜಿಲ್ಲೆಯ ಬಸವ ಕಲ್ಯಾಣ ತಾಲೂಕಿನ ಸುಕ್ಷೇತ್ರ ಹಾರಕೊಡದ ಹಿರೇಮಠ ಚೆನ್ನಬಸವೇಶ್ವರ ಸಂಸ್ಥಾನವು ಕಲ್ಯಾಣ ಕರ್ನಾಟಕ ಸಂಗೀತ ರತ್ನ ಪ್ರಶಸ್ತಿ ನೀಡಿದೆ .

ಪ್ರಶಸ್ತಿಯು ಹತ್ತು ಸಾವಿರ ರೂಪಾಯಿ ನಗದನ್ನು ಒಳಗೊಂಡಿದ್ದೆ. ಡಾ. ಪಂಡಿತ ಸಿದ್ದರಾಮಯ್ಯ ಮಠಪತಿ ಅವರು ಕಳೆದ ಮೂವತ್ತು ವರ್ಷಗಳಿಂದ ಸಂಗೀತದ ಸೇವೆಯಲ್ಲಿ ತಮ್ಮನ್ನು ತೋಡಗಿಸಿಕೊಂಡು ರಾಜ್ಯ ಮತ್ತು ರಾಷ್ಟçಮಟ್ಟದಲ್ಲಿ ಕಾರ್ಯಕ್ರಮವನ್ನು ನೀಡಿದ್ದಾರೆ. ಜ.31ರಂದು ಹಾರಕೊಡದಲ್ಲಿ ನಡೆಯುವ ಕಲ್ಯಾಣ ಕರ್ನಾಟಕದ 10ನೇ ಸಂಗೀತ ದಿನಾಚಾರಣೆಯ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸುವರು. ಪ್ರಶಸ್ತಿ ಪುರಸ್ಕೃತರಿಗೆ ಸಂಗೀತಗಾರರು, ಶಿಷ್ಯರು ಅಭಿನಂದಿಸಿದ್ದಾರೆ


Spread the love

About Laxminews 24x7

Check Also

ಬಾಗಲಕೋಟೆಯಲ್ಲಿ ತೋಟಗಾರಿಕಾ ಮೇಳ–2025

Spread the loveಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ತೋಟಗಾರಿಕೆ, ಕೃಷಿ ಹಾಗೂ ಇತರೆ ಅಭಿವೃದ್ಧಿ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ತೋಟಗಾರಿಕಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ