Breaking News

ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ

Spread the love

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವವು ಅಂತ್ಯಗೊಂಡಿದ್ದು, ಜಪಾನ್‌ ದೇಶದದ ʻಲಾಸ್ಟ್‌ ಲ್ಯಾಂಡ್‌ʼ , ಮರಾಠಿಯ ʻಸಬರ್‌ ಬೊಂದಾʼ ಮತ್ತು ʻವನ್ಯಾʼ ಚಿತ್ರಗಳು ಚಿತ್ರೋತ್ಸವದ ಏಷ್ಯಾ, ಭಾರತ ಮತ್ತು ಕನ್ನಡ ವಿಭಾಗಗಳಲ್ಲಿ ಅತ್ಯುತ್ತಮ ಚಿತ್ರ ಪ್ರಶಸ್ತಿಗಳನ್ನು  ತನ್ನದಾಗಿಸಿಕೊಂಡಿವೆ.

ಅತ್ಯುತ್ತಮ ಪ್ರಶಸ್ತಿ ವಿಜೇತರಿಗೆ ಪಾರಿತೋಷಕದ ಜೊತೆಗೆ 10 ಲಕ್ಷ ರೂ. ನಗದು ಬಹುಮಾನ ನೀಡಲಾಯಿತು. ದ್ವಿತೀಯ ಮತ್ತು ತೃತೀಯ ಅತ್ಯುತ್ತಮ ಚಿತ್ರ ಪ್ರಶಸ್ತಿಗಳನ್ನು ಗೆದ್ದವರಿಗೆ ತಲಾ ಐದು ಲಕ್ಷ ರೂ. ಮತ್ತು ಎರಡು ಲಕ್ಷ ರೂ. ನೀಡಿ ಗೌರವಿಸಲಾಯಿತು.

ಏಷ್ಯನ್‌ ಚಿತ್ರ ವಿಭಾಗದಲ್ಲಿ ಈ ವರ್ಷ ಒಟ್ಟು 15 ಚಿತ್ರಗಳು ಪ್ರಶಸ್ತಿ ಕಣದಲ್ಲಿದ್ದವು. ಈ ಪೈಕಿ ಜಪಾನ್‌ನ ʻದಿ ಲಾಸ್ಟ್‌ ಲ್ಯಾಂಡ್‌ʼ ಅತ್ಯುತ್ತಮ ಚಿತ್ರ ಪ್ರಶಸ್ತಿಗೆ ಪಾತ್ರವಾದರೆ, ಭಾರತದ ʻಶೇಪ್‌ ಆಫ್‌ ಮೋಮೋʼ ಮತ್ತು ಜಪಾನ್‌ನ ʼದಿ ಡೀಪೆಸ್ಟ್‌ ಸ್ಪೇಸ್‌ ಇನ್‌ ಯೂಎಸ್‌ʼ ಚಿತ್ರಗಳು ದ್ವಿತೀಯ ಮತ್ತು ತೃತೀಯ ಚಿತ್ರ ಪ್ರಶಸ್ತಿಗೆ ಭಾಜನವಾಗಿವೆ. ಫಿಲಿಪೈನ್ಸ್‌ನ ʻರಿಪಬ್ಲಿಕ್‌ ಆಫ್‌ ಪಿಪೊಲಿಪಿನಾಸ್‌ʼ ಚಿತ್ರವು ತೀರ್ಪುಗಾರರ ವಿಶೇಷ ಮೆಚ್ಚುಗೆಯನ್ನು ಪಡೆದಿದೆ.

ಭಾರತೀಯ (ಚಿತ್ರಭಾರತಿ) ವಿಭಾಗದಲ್ಲಿ ಮರಾಠಿ ಚಿತ್ರ ʻಸಬರ್‌ ಬೊಂಡಾʼ ಅತ್ಯುತ್ತಮ ಚಿತ್ರ ಪ್ರಶಸ್ತಿ ತನ್ನದಾಗಿಸಿಕೊಂಡರೆ, ಮಲಯಾಳಂನ ʻಮೋಹಂʼ ಮತ್ತು ʻಕಾಡುʼ ಚಿತ್ರಗಳು ಕ್ರಮವಾಗಿ ದ್ವಿತೀಯ ಮತ್ತು ತೃತೀಯ ಚಿತ್ರ ಪ್ರಶಸ್ತಿಗಳನ್ನು ಗೆದ್ದಿವೆ. ಮರಾಠಿ ಭಾಷೆಯ ʻಗೊಂದಾಳ್‌ʼ ಚಿತ್ರವು ಫಿಪ್ರೆಸ್ಕಿ ಪ್ರಶಸ್ತಿ ಪಡೆದರೆ, ಮಲಯಾಳಂ ಭಾಷೆಯ ʻಸರ್ಕೀಟ್‌ʼ ಚಿತ್ರವು ತೀರ್ಪುಗಾರರ ವಿಶೇಷ ಮೆಚ್ಚುಗೆಯನ್ನು ಪಡೆದಿದೆ.

ಕನ್ನಡ ಸ್ಪರ್ಧಾ ವಿಭಾಗದಲ್ಲಿ ಈ ಬಾರಿ 14 ಚಿತ್ರಗಳು ಸ್ಪರ್ಧಿಸಿದ್ದು, ಈ ಪೈಕಿ ʻವನ್ಯಾʼ ಚಿತ್ರವು ಅತ್ಯುತ್ತಮ ಪ್ರಶಸ್ತಿಯನ್ನು ಗೆದ್ದಿದೆ. ದ್ವಿತೀಯ ಹಾಗೂ ತೃತೀಯ ಅತ್ಯುತ್ತಮ ಚಿತ್ರಗಳಾಗಿ ʻನಮ್‌ ಸಾಲಿʼ ಮತ್ತು ʻರಾವಣ ರಾಜ್ಯದಲ್ಲಿ ನವದಂಪತಿಗಳುʼ ಆಯ್ಕೆಯಾದರೆ, ʻಹಕ್ಕಿಗಾಗಿʼ ಚಿತ್ರಕ್ಕಾಗಿ ನೆಟ್‌ಪ್ಯಾಕ್‌ ತೀರ್ಪುಗಾರರ ಪ್ರಶಸ್ತಿ ಸಿಕ್ಕಿದೆ. ʻಮೃಗತೃಷ್ಣʼ ಮತ್ತು ʻಫೋರ್‌ ಬೈ ಫೋರ್‌ʼ ಚಿತ್ರಗಳು ತೀರ್ಪುಗಾರರ ವಿಶೇಷ ಮನ್ನಣೆಗೆ ಭಾಜನವಾಗಿವೆ.

ಈ ಚಿತ್ರೋತ್ಸವದಲ್ಲಿ 70 ದೇಶಗಳ ಸುಮಾರು 300ಕ್ಕೂ ಹೆಚ್ಚು ಅತ್ಯುತ್ತಮ ಚಲನಚಿತ್ರಗಳು, ವಿಶ್ವದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಪಾಲ್ಗೊಂಡಿದ್ದ ಅತ್ಯುತ್ತಮ ಚಲನಚಿತ್ರಗಳು ಪ್ರದರ್ಶನಗೊಂಡಿವೆ. ಈ ಚಿತ್ರೋತ್ಸವವನ್ನು ಪ್ರತೀ ವರ್ಷವೂ ಅರ್ಥಪೂರ್ಣವಾದ ಧ್ಯೇಯವಾಕ್ಯದ ಮೂಲಕ ನಡೆಸಲಾಗುತ್ತಿದ್ದು, ಈ ಬಾರಿ ರಾಷ್ಟ್ರಕವಿ ಡಾ.ಜಿ.ಎಸ್‌. ಶಿವರುದ್ರಪ್ಪನವರ ಪ್ರಸಿದ್ಧ ಗೀತೆಯಾಗಿರುವ ‘ಸ್ತ್ರೀ ಎಂದರೆ ಅಷ್ಟೇ ಸಾಕೆ’ ಎಂಬ ಸಾಲಿನೊಂದಿಗೆ ʼಸ್ತ್ರೀ ಸಂವೇದನೆ, ಸಮಾನತೆಯ ದನಿʼ ಎಂಬ ಟ್ಯಾಗ್‌ ಲೈನ್‌ ಹೊಂದಿರುವ ಧ್ಯೇಯವಾಕ್ಯದೊಂದಿಗೆ ಆಚರಿಸಲಾಯಿತು.


Spread the love

About Laxminews 24x7

Check Also

ದೇಶದಲ್ಲೇ ʻನಮ್ಮ ಮೆಟ್ರೋʼ ಬಲು ದುಬಾರಿ; ಟಿಕೆಟ್ ದರ ವಿಚಾರದಲ್ಲೂ ರಾಜ್ಯ-ಕೇಂದ್ರದ ಸಂಘರ್ಷ

Spread the loveಬೆಂಗಳೂರು: ಸಿಲಿಕಾನ್‌ ಸಿಟಿಯ ಸಂಚಾರ ನಾಡಿ ನಮ್ಮ ಮೆಟ್ರೋ ಪ್ರಯಾಣ ಮತ್ತಷ್ಟು ದುಬಾರಿಯಾಗಿದೆ. ಪ್ರತಿವರ್ಷ ಫೆಬ್ರುವರಿ ತಿಂಗಳಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ