Breaking News

ಮನರೇಗಾ ಹೆಸರು ಬದಲಿಸದಿರಲು ಆಗ್ರಹ

Spread the love

ಸಂಕೇಶ್ವರ: ಮನರೇಗಾ ಹೆಸರನ್ನು ಬದಲಾಯಿಸದಂತೆ ಒತ್ತಾಯಿಸಿ ಸಮೀಪದ ಗೋಟೂರ ಗ್ರಾಮದ ನರೇಗಾ ಕೂಲಿಕಾರ್ಮಿಕರು ಪ್ರತಿಭಟನೆ ನಡೆಸಿ, ಯೋಜನೆಯನ್ನು ಮೊದಲಿನಂತೆಯೇ ಮುಂದುವರಿಸುವಂತೆ ಗ್ರಾಪಂ ಅಭಿವೃದ್ಧಿ ಅಧಿಕಾರಿಗೆ ಈಚೆಗೆ ಮನವಿ ಸಲ್ಲಿಸಿದರು.
ಕೇಂದ್ರ ಸರ್ಕಾರ ಮನರೇಗಾ ಯೋಜನೆಗೆ ತಿದ್ದುಪಡಿ ಮಾಡಿ, ಮಾನವ ದಿನಗಳನ್ನು ಕೇಂದ್ರ ಸರ್ಕಾರ ಸೂಚಿಸದಂತೆ ಸೃಜಿಸಬೇಕು, ಕೂಲಿಕಾರ್ಮಿಕರ ವೇತನ ಮತ್ತು ಸಾಮಗ್ರಿಗಳಿಗಾಗಿ ರಾಜ್ಯ ಹಾಗೂ ಕೇಂದ್ರಗಳ ಪ್ರಮಾಣಿತ ಹಂಚಿಕೆ ಬದಲಿಸಲಾಗಿದೆ. ಕೆಲಸದ ಸಮಯಕ್ಕೆ ನಿರ್ಬಂಧ ಹೇರಲಾಗಿದೆ. ಈ ಮೂಲಕ ಉದ್ಯೋಗ ಖಾತ್ರಿ ಯೋಜನೆಯ ಮೂಲ ಸ್ವರೂಪ ಬದಲಾಯಿಸಲಾಗಿದೆ. ಆದ್ದರಿಂದ ಮೊದಲಿನಂತೆಯೇ ಯೋಜನೆ ಮುಂದುವರಿಸುವಂತೆ ಒತ್ತಾಯಿಸಿದರು.
ಹನುಮಂತ ಶೇಖನವರ, ಸಚಿನ ಮನ್ನಿಕೇರಿ, ರವಿಂದ್ರ ಮಾಸೇವಾಡಿ, ಗುರುನಾಥ ಶಿಂಧೆ, ರಾಜು ನಾಯಿಕ, ಯಶವಂತ ಹತ್ತರಗಿ ಇತರರಿದ್ದರು.

Spread the love

About Laxminews 24x7

Check Also

ಕುಟುಂಬದ ಭದ್ರತೆಗಾಗಿ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಿ

Spread the love ಬೆಳಗಾವಿಯ ಎಂಎನ್‌ಆರ್‌ಎ ಶಿಕ್ಷಣ ಮಹಾವಿದ್ಯಾಲಯದಲ್ಲಿ ಶುಕ್ರವಾರ ಜರುಗಿದ ಸಂಚಾರ ರಸ್ತೆ ಸುರಕ್ಷತೆ ಜಾಗೃತಿ ಕಾರ್ಯಕ್ರಮವನ್ನು ಸಿಪಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ