Breaking News

ಮನರೇಗಾ ಹೆಸರು ಬದಲಿಸದಿರಲು ಆಗ್ರಹ

Spread the love

ಸಂಕೇಶ್ವರ: ಮನರೇಗಾ ಹೆಸರನ್ನು ಬದಲಾಯಿಸದಂತೆ ಒತ್ತಾಯಿಸಿ ಸಮೀಪದ ಗೋಟೂರ ಗ್ರಾಮದ ನರೇಗಾ ಕೂಲಿಕಾರ್ಮಿಕರು ಪ್ರತಿಭಟನೆ ನಡೆಸಿ, ಯೋಜನೆಯನ್ನು ಮೊದಲಿನಂತೆಯೇ ಮುಂದುವರಿಸುವಂತೆ ಗ್ರಾಪಂ ಅಭಿವೃದ್ಧಿ ಅಧಿಕಾರಿಗೆ ಈಚೆಗೆ ಮನವಿ ಸಲ್ಲಿಸಿದರು.
ಕೇಂದ್ರ ಸರ್ಕಾರ ಮನರೇಗಾ ಯೋಜನೆಗೆ ತಿದ್ದುಪಡಿ ಮಾಡಿ, ಮಾನವ ದಿನಗಳನ್ನು ಕೇಂದ್ರ ಸರ್ಕಾರ ಸೂಚಿಸದಂತೆ ಸೃಜಿಸಬೇಕು, ಕೂಲಿಕಾರ್ಮಿಕರ ವೇತನ ಮತ್ತು ಸಾಮಗ್ರಿಗಳಿಗಾಗಿ ರಾಜ್ಯ ಹಾಗೂ ಕೇಂದ್ರಗಳ ಪ್ರಮಾಣಿತ ಹಂಚಿಕೆ ಬದಲಿಸಲಾಗಿದೆ. ಕೆಲಸದ ಸಮಯಕ್ಕೆ ನಿರ್ಬಂಧ ಹೇರಲಾಗಿದೆ. ಈ ಮೂಲಕ ಉದ್ಯೋಗ ಖಾತ್ರಿ ಯೋಜನೆಯ ಮೂಲ ಸ್ವರೂಪ ಬದಲಾಯಿಸಲಾಗಿದೆ. ಆದ್ದರಿಂದ ಮೊದಲಿನಂತೆಯೇ ಯೋಜನೆ ಮುಂದುವರಿಸುವಂತೆ ಒತ್ತಾಯಿಸಿದರು.
ಹನುಮಂತ ಶೇಖನವರ, ಸಚಿನ ಮನ್ನಿಕೇರಿ, ರವಿಂದ್ರ ಮಾಸೇವಾಡಿ, ಗುರುನಾಥ ಶಿಂಧೆ, ರಾಜು ನಾಯಿಕ, ಯಶವಂತ ಹತ್ತರಗಿ ಇತರರಿದ್ದರು.

Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ