ರಾಮದುರ್ಗ: ತಾಲೂಕಿನ ರೈತರ ಹಿತದೃಷ್ಟಿಯಿಂದ ವೀರಭದ್ರೇಶ್ವರ ಹಾಗೂ ಸಾಲಾಪುರ ಬಸವೇಶ್ವರ ಏತ ನೀರಾವರಿ ಯೋಜನೆಗಳಿಂದ ಶ್ರೀವೇ ರೈತರ ಜಮೀನಿಗೆ ನೀರು ಹರಿಸಬೇಕು ಎಂದು ರಾಜ್ಯ ರೈತ ಸಂದ ಅಧ್ಯಕ್ಷ ಚೂನಪ್ಪ ಪೂಜಾರಿ ಒತ್ತಾಯಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವೀರಭದ್ರೇಶ್ವರ, ಬಸವೇಶ್ವರ ಏತ ನೀರಾವರಿ ಯೋಜನೆಗಳ ಕಾಮಗಾರಿ ನಡೆದು 10 ವರ್ಷ ಕಳೆದಿವೆ. ಈವರೆಗೆ ರೈತರ ಜಮೀನುಗಳಿಗೆ ನೀರು ಹರಿಯದಿರುವುದು ರಾಜಕಾರಣಿಗಳ ಇಚ್ಛಾಶಕ್ತಿ ಕೊರತೆ ಪ್ರದರ್ಶಿಸುತ್ತದೆ ಎಂದು ದೂರಿದರು. ಬಾಕಿ ಕಾಮಗಾರಿ ಪೂರ್ಣಗೊಳಿಸಿ, ಶ್ರೀ ರೈತರ ಜಮೀನುಗಳಿಗೆ ನೀರು ಒದಗಿಲು ಕ್ರಮವಹಿಸಬೇಕು. ಇಲ್ಲವಾದಲ್ಲಿ ಗುರ್ಲಾಪುರ ಹೋರಾಟದ ಮಾದರಿ ಸಾಲಹಳ್ಳಿ ಮುಖ್ಯರಸ್ತೆ ಬಂದ್ ಮಾಡಿ, ಅರ್ನಿದಿಷ್ಟಾವಧಿ ಸತ್ಯಾಗ್ರಹ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ಕುಮಾರ ವರ್ದಿ, ಸತ್ಯಪ್ಪ ಮಲ್ಲಾಪುರ ಇತರರಿದ್ದರು.
Laxmi News 24×7