Breaking News

ಫೆ.13 ರಿಂದ ಮೂರು ದಿನಗಳ ಕಾಲ ಹಂಪಿ ಉತ್ಸವ – ಅದ್ಧೂರಿಯಾಗಿ ನೆರವೇರಿದ ತುಂಗಭದ್ರಾ ಆರತಿ

Spread the love

ಬಳ್ಳಾರಿ: ಫೆ.13 ರಿಂದ 15ರ ವರೆಗೆ ಮೂರು ದಿನಗಳ ಕಾಲ ಹಂಪಿ ಉತ್ಸವದ (Hampi Utsava) ಹಿನ್ನೆಲೆ ಬುಧವಾರ (ಫೆ.11) ಸಂಜೆ ಹಂಪಿಯ ತುಂಗಭದ್ರಾ ನದಿಯ ದಡದಲ್ಲಿ ಅದ್ಧೂರಿಯಾಗಿ ತುಂಗಭದ್ರಾ (Tunga Bhadra Arati) ಆರತಿ ನೆರೆವೇರಿಸಲಾಯಿತು.

ಅರ್ಚಕರು ಸಾಲಾಗಿ ನಿಂತು, ಮಂತ್ರಘೋಷಗಳ ನಡುವೆ ದೊಡ್ಡದಾದ ಕಂಚಿನ ದೀಪಗಳಿಂದ ನದಿಗೆ ಆರತಿ ಬೆಳಗಿದರು. ನದಿಯ ನೀರಿನಲ್ಲಿ ಪ್ರತಿಫಲಿಸುವ ದೀಪದ ಬೆಳಕು, ಮಂತ್ರಗಳ ಪಠಣ ಮತ್ತು ಶಂಖನಾದವು ಭಕ್ತರಲ್ಲಿ ಹಾಗೂ ಪ್ರವಾಸಿಗರಲ್ಲಿ ಭಕ್ತಿಭಾವ ಮೂಡಿಸಿತು.

ದೇಶ – ವಿದೇಶಗಳ ಸಾವಿರಾರು ಪ್ರವಾಸಿಗರು ತುಂಗಭದ್ರಾ ಆರತಿಯನ್ನು ಕಣ್ತುಂಬಿಕೊಂಡರು. ಉಸ್ತುವಾರಿ ಸಚಿವ ಜಮೀರ್ ಅಹಮ್ಮದ್ ಖಾನ್, ಮಾಜಿ ಶಾಸಕ ಭೀಮಾನಾಯ್ಕ್, ಡಿಸಿ ಕವಿತಾ ಮನ್ನಿಕೇರಿ, ಎಸ್‌ಪಿ ಜಾಹ್ನವಿ, ಸಿಇಒ ಅಕ್ರಂ ಷಾ ಸೇರಿದಂತೆ ಅನೇಕರು ಭಾಗಿಯಾಗಿದ್ದರು.


Spread the love

About Laxminews 24x7

Check Also

ಮಹಾಲಿಂಗೇಶ್ವರ ದೇವಸ್ಥಾನದ ರಾಜಗೋಪುರ ಸಮರ್ಪಣೆ

Spread the loveಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಹೇರಂಜಾಲು ಶ್ರೀ ಗುಡೇ ಮಹಾಲಿಂಗೇಶ್ವರ ದೇವಸ್ಥಾನದ ಪವಿತ್ರ ಸನ್ನಿಧಿಯಲ್ಲಿ ನಡೆದ ನೂತನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ