Breaking News

ಧರ್ಮಸ್ಥಳಕ್ಕೆ ಪಾದಯಾತ್ರೆ ತೆರಳುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

Spread the love

ಹಾಸನ: ಧರ್ಮಸ್ಥಳಕ್ಕೆ  ಪಾದಯಾತ್ರೆ  ತೆರಳುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ  ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ, ಬೇಲೂರು ತಾಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ಬುಧವಾರ ತಡರಾತ್ರಿ ನಡೆದಿದೆ.

ಕೃಷ್ಣ (50) ಹೃದಯಾಘಾತದಿಂದ ಸಾವನ್ನಪ್ಪಿದ ವ್ಯಕ್ತಿ. ಹಾಸನ ತಾಲೂಕಿನ, ಜಕ್ಕೇನಹಳ್ಳಿ ಗ್ರಾಮದ ಕೃಷ್ಣ ಧರ್ಮಸ್ಥಳಕ್ಕೆ ಪಾದಯಾತ್ರೆ ಹೊರಟಿದ್ದರು. ಅವರ ಅಳಿಯ ದಿನೇಶ್ ಹಿಂದೆಯೇ ನಡೆದುಕೊಂಡು ಬರುತ್ತಿದ್ದು, ಬುಧವಾರ ರಾತ್ರಿ ಮೊದಲು ಚೀಕನಹಳ್ಳಿ ಗ್ರಾಮ ತಲುಪಿದ ಕೃಷ್ಣ ಅಳಿಯ ಅಲ್ಲಿಗೆ ಬರುವವರೆಗೂ ಚೀಕನಹಳ್ಳಿ ಗ್ರಾಮದ ಆಟೋ ನಿಲ್ದಾಣದಲ್ಲಿ ವಿಶ್ರಾಂತಿ ಪಡೆಯಲು ಮಲಗಿದ್ದರು. ಅಳಿಯ ದಿನೇಶ್ ಆಟೋ ನಿಲ್ದಾಣಕ್ಕೆ ಬಂದು ಮಾವನನ್ನು ಎಬ್ಬಿಸಿದ್ದು, ಅಷ್ಟರಲ್ಲಿ ಮಲಗಿದಲ್ಲಿಯೇ ಸಾವನ್ನಪ್ಪಿದ್ದರು.

ನಂತರ ಆಟೋದಲ್ಲಿ ಬೇಲೂರು ತಾಲೂಕು ಆಸ್ಪತ್ರೆಗೆ ಕೃಷ್ಣ ಅವರನ್ನು ಕರೆ ತಂದಿದ್ದು, ಹೃದಯಾಘಾತದಿಂದ ಸಾವನ್ನಪ್ಪಿರುವುದನ್ನು ವೈದ್ಯರು ದೃಢಪಡಿಸಿದ್ದಾರೆ. ನಂತರ ಮೃತದೇಹವನ್ನು ಜಕ್ಕೇನಹಳ್ಳಿ ಗ್ರಾಮಕ್ಕೆ ಕೊಂಡೊಯ್ದಿದ್ದಾರೆ. ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ತಿರಂಗ ಯಾತ್ರೆಯಲ್ಲಿ ಗಮನ ಸೆಳೆದ ಈಸೂರು ದಂಗೆಯ ಸ್ತಬ್ಧಚಿತ್ರ

Spread the loveಶಿವಮೊಗ್ಗ: ನಗರದ  ಶೀನಪ್ಪಶೆಟ್ಟಿ ವೃತ್ತದಲ್ಲಿ ಸ್ವಾತಂತ್ರ್ಯೋತ್ಸವ  ಅಂಗವಾಗಿ ಬಿಜೆಪಿ ವತಿಯಿಂದ ರಾಮಣ್ಣಶ್ರೇಷ್ಟಿ ಪಾರ್ಕ್‌ನಿಂದ ಗೋಪಿ ವೃತ್ತದವರೆಗೆ ತಿರಂಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ