ಬೆಂಗಳೂರು : ರೌಡಿ ಶೀಟರ್ ಬಿಲ್ಲು ಶಿವ ಕೊಲೆ ಪ್ರಕರಣದ ಆರೋಪಿ ಜೊತೆ ಸಂಪರ್ಕ ಹೊಂದಿರುವ ಆರೋಪ ಹೊತ್ತ ಬಿಜೆಪಿ ಶಾಸಕ ಬೈರತಿ ಬಸವರಾಜು ಬಂಧನವಾಗಿದೆ.
ಗುರುವಾರ ಸಂಜೆ ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಐಡಿ ಅಧಿಕಾರಿಗಳ ತಂಡ ಬೈರತಿ ಬಸವರಾಜ ಅವರನ್ನು ಬಂಧಿಸಿದೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಆದರೆ ಇವರಿಗೆ ಜಾಮೀನು ನೀಡಲು ಕೋರ್ಟ್ ನಿರಾಕರಿಸಿತ್ತು. ಕೊನೆಗೂ ಬೈರತಿ ಬಂಧನವಾಗಿದೆ.
Laxmi News 24×7