ಧಾರವಾಡ: ಖಾಲಿ ಇರುವ 2.84 ಲಕ್ಷ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಇಂದು ಧಾರವಾಡದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು. ಶಿಕ್ಷಣ, ಪೊಲೀಸ್, ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳಲ್ಲಿನ ಹುದ್ದೆಗಳನ್ನು ಭರ್ತಿ ಮಾಡುವಂತೆ ಅಭ್ಯರ್ಥಿಗಳು ಆಗ್ರಹಿಸಿದರು.
ಉದ್ಯೋಗ ಬೇಕು ಎಂದು ಭಿತ್ತಿಪತ್ರ ಹಿಡಿದು ಸಾವಿರಾರು ಯವಕರು ಆಗಮಿಸಿದರು. ಈ ವೇಳೆ ಪೊಲೀಸರು-ಪ್ರತಿಭಟನಾಕಾರರ ಮಧ್ಯೆ ತಳ್ಳಾಟ-ನೂಕಾಟ ನಡೆಯಿತು. ಪ್ರತಿಭಟನೆಗೆ ಅನುಮತಿ ನಿಡಲು ಪೊಲೀಸ್ (Police) ಇಲಾಖೆಯಿಂದ ಕಿರಿಕಿರಿಯಾಗಿತ್ತು. ಎರಡನೇ ಬಾರಿಯ ಬೃಹತ್ ಪ್ರತಿಭಟನೆಗೆ ಪೊಲೀಸರು ಅಡ್ಡಿಯಾಗುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. ಇದೇ ವಿಚಾರವಾಗಿ ಉದ್ಯೋಗಾಕಾಂಕ್ಷಿಗಳು ಮತ್ತು ಪೊಲೀಸರ ನಡುವೆ ದೊಡ್ಡ ಮಾತಿನ ಚಕಮಕಿ ನಡೆಯಿತು.
ಉದ್ಯೋಗ ಬೇಕು ಎಂಬ ಭಿತ್ತಿಪತ್ರ ಹಿಡಿದು ಬಂದ ಯುವಕರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸಿದ್ದರಾಮಯ್ಯ ಭಾವಚಿತ್ರವನ್ನು ಸುಟ್ಟು ಹಾಕಿ ಸಿಟ್ಟು ಹೊರಹಾಕಿದರು. ಸರ್ಕಾರ ರಚನೆಯಾದರೆ ಸರ್ಕಾರಿ ಹುದ್ದೆಗಳನ್ನು ನೇಮಕ ಮಾಡಲಾಗುವುದು ಎಂದು ಭರವಸೆ ನೀಡಿದ್ದರು. ಸರ್ಕಾರ ರಚನೆಯಾಗಿ ಎರಡೂವರೆ ವರ್ಷವಾದರೂ ಇನ್ನು ನೇಮಕ ಪ್ರಕ್ರಿಯೆ ನಡೆಸಿಲ್ಲ ಯಾಕೆ ಎಂದು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡರು.
Laxmi News 24×7