ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಂಗನವಾಡಿ ಮಕ್ಕಳಿಗೆ ಎಕ್ಸ್ಪೈರ್ಡ್ ಸಿರಿಧಾನ್ಯ ಲಡ್ಡು ಪೂರೈಕೆ ಮಾಡಲಾಗಿದೆ. ಅಂಗನವಾಡಿ ಮಕ್ಕಳ ಆರೋಗ್ಯದ ಜೊತೆಗೆ ಮಹಿಳಾ ಮತ್ತು ಮಕ್ಕಳ ಇಲಾಖೆ ಅಧಿಕಾರಿಗಳ ಚೆಲ್ಲಾಟವಾಡುತ್ತಿದ್ದಾರೆ. ರಾಜ್ಯದ ಅಂಗನವಾಡಿ ಮಕ್ಕಳಿಗೆ ಪೌಷ್ಟಿಕ ಆಹಾರ ಸಿಗಲೆಂಬ ಉದ್ದೇಶಕ್ಕೆ ಮಿಲೆಟ್ ಲಡ್ಡು ವಿತರಣೆ ಮಾಡಲಾಗುತ್ತಿದೆ. ಆದರೆ ಪೌಷ್ಟಿಕ ಆಹಾರ ವಿತರಣೆಯಲ್ಲೇ ಭಾರಿ ಅಕ್ರಮ ಬೆಳಕಿಗೆ ಬಂದಿದೆ.
ಬೆಳಗಾವಿಯ ಮೂರು ಅಂಗನವಾಡಿ ಕೇಂದ್ರಗಳಿಗೆ ಕನ್ನಡ ಹೋರಾಟಗಾರ್ತಿ ಕಸ್ತೂರಿಭಾವಿ ಭೇಟಿ ನೀಡಿದ್ದು, ಭೇಟಿಯ ವೇಳೆ ಆರು ತಿಂಗಳ ಹಿಂದೆಯೇ ಎಕ್ಸ್ಪೈರ್ಡ್ ಆಗಿರುವ ಪದಾರ್ಥಗಳ ವಿತರಣೆ ಮಾಡಿದ್ದು ಕಂಡು ಬಂದಿದೆ. ಈ ವೇಳೆ ತಾವೇ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಕಸ್ತೂರಿಭಾವಿ ಫೋಸ್ಟ್ ಮಾಡಿದ್ದು, ವೈರಲ್ ಆಗ್ತಿರುವ ವಿಡಿಯೋದಲ್ಲಿ ಹುಳ ಬಿದ್ದ ರವಾ, ಅವಧಿ ಮುಗಿದ ಸಜ್ಜೆ ಲಡ್ಡು, ಸಾಂಬಾರ್ ಪುಡಿ ಕಾಣುತ್ತಿದೆ.
2025ರ ಅಕ್ಟೋಬರ್ನಲ್ಲಿ ಎಕ್ಸ್ಪೈರ್ಡ್ ಆಗಿರುವ ಮಿಲೆಟ್ ಲಡ್ಡು ಈಗ ವಿತರಣೆ ಮಾಡಲಾಗಿದ್ದು, ಅಧಿಕಾರಿಗಳು, ಅಂಗನವಾಡಿ ಸಹಾಯಕಿಯರ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Laxmi News 24×7