ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಯುವಕರನ್ನು ಬಂಧಿಸಲು ಮುಂದಾದ ಪೊಲೀಸರನ್ನು ಮಹಿಳೆಯರು ಅಡ್ಡಗಟ್ಟಿ ಪ್ರತಿಭಟಿಸಿದ್ದಾರೆ.
ಇಂದು ಪೊಲೀಸರು ಕಿಲ್ಲಾ ಓಣಿಯ ಯುವಕ ಮತ್ತು ಮಾಗಿಯನ್ನು ಬಂಧಿಸಿ ಕಾರಿನಲ್ಲಿ ಕರೆದುಕೊಂಡು ಹೋಗಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಮಹಿಳೆಯರು ಮತ್ತು ಓಣಿಯ ಜನರು ಬಂಧಿಸದಂತೆ ತಡೆದಿದ್ದಾರೆ.
ಕಲ್ಲೆಸೆತ ಮಾಡಿದ ಕಿಡಿಗೇಡಿಗಳನ್ನು ಬಿಟ್ಟು ಅಮಾಯಕರನ್ನು ಬಂಧಿಸಿ ಪೊಲೀಸರು ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಜನರು ಆಕ್ರೋಶ ಹೊರಹಾಕಿದ್ದಾರೆ. ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಮಹಿಳೆಯರು ಮಾಗಿಯನ್ನು ಮನೆಗೆ ಕಳುಹಿಸಿ ಇಲ್ಲದೇ ಇದ್ದರೆ ಠಾಣೆಯ ಮುಂದೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಕಿಲ್ಲಾಗಲ್ಲಿಗೆ ಆಗಮಿಸಿದ ಎಎಸ್ಪಿ ಜಗದೀಶ್ ಅವರ ಮುಂದೆ ಸಮಸ್ಯೆ ಹೇಳಿಕೊಂಡ ಮಹಿಳೆಯರು ಕಲ್ಲು ಎಸೆದವರನ್ನು ಬಿಟ್ಟು ನಮ್ಮ ಹುಡುಗರನ್ನು ಬಂಧಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು. ಪೊಲೀಸರು ನಮ್ಮ ಬಟ್ಟೆ ಹಿಡಿದು ಎಳೆದಾಡಿದ್ದಾರೆ ಎಂದು ದೂರಿದರು.
Laxmi News 24×7