ಮಡಿಕೇರಿ: ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿಯಾಗಿರುವ ಘಟನೆ ಶನಿವಾರ ಸಂಜೆ ಮಡಿಕೇರಿ ತಾಲ್ಲೂಕಿನ ಬೆಟ್ಟತೂರು ಗ್ರಾಮದಲ್ಲಿ ನಡೆದಿದೆ.
ಮಡಿಕೇರಿ ತಾಲೂಕಿನ ಮದೆ ಗ್ರಾಮ ಪಂಚಾಯಿತಿಯ ಬೆಟ್ಟತೂರು ಗ್ರಾಮದ ಗಿರೀಶ್ ಅವರ ಪುತ್ರಿ ಪೂಜಾ (17) ಮೃತ ದುರ್ದೈವಿ. ಮಡಿಕೇರಿಯ ಸಂತ ಮೈಕೆಲ್ ಶಾಲೆಯ ಪ್ರಥಮ PUC ಯಲ್ಲಿ ವ್ಯಾಸಂಗ ಮಾಡುತಿದ್ದ ಪೂಜಾ ನಿನ್ನೆ ಸಂಜೆ 5:30ಕ್ಕೆ ಕಾಲೇಜು ಮುಗಿಸಿ ಮತ್ತೆ ಬೆಟ್ಟತೂರಿಗೆ ಬಂದಿದ್ದಳು. ಬಸ್ಸಿನಿಂದಿಳಿದು ಮನೆಗೆ ಹೋಗುವಾ ಏಕಾಏಕಿ ಬಂದ ಕಾಡಾನೆ ಡಿಕೇರಿಯ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.
ವಿದ್ಯಾರ್ಥಿನಿ ಪೂಜಾ ಹತ್ಯೆ ಖಂಡಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಆನೆ ದಾಳಿ ತಡೆಯುವಲ್ಲಿ ಅರಣ್ಯ ಇಲಾಖೆ ಸಂಪೂರ್ಣ ವಿಫಲವಾಗಿದೆ. ಮಾನ ಸಂಘರ್ಷ ತಡೆಗೆ ಕೂಡಲೇ ಅರಣ್ಯ ಇಲಾಖೆ ಇದಕ್ಕೆ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ
Laxmi News 24×7