Breaking News

ಫೇಲಾದ ವಿದ್ಯಾರ್ಥಿಯೊಬ್ಬ ಮನನೊಂದು ಆತ್ಮಹತ್ಯೆ…………

Spread the love

ದಾವಣಗೆರೆ: ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಫೇಲಾದ ವಿದ್ಯಾರ್ಥಿಯೊಬ್ಬ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ಜಯರಾಮ್(18) ಮೃತ ವಿದ್ಯಾರ್ಥಿ. ರಿಸಲ್ಟ್​ ಬಂದ ಕೂಡಲೇ ತಾನು ಫೇಲಾಗಿರುವ ವಿಷಯ ತಿಳಿದು ಮನೆಯಲ್ಲೇ ನೇಣಿಗೆ ಶರಣಾಗಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ದಾವಣಗೆರೆ ಜಿಲ್ಲೆಯ ಹರಿಹರದ ಪಕ್ಕೀರಸ್ವಾಮಿ ಬಳಿ ಈ ಘಟನೆ ನಡೆದಿದೆ. ಭೌತಶಾಸ್ತ್ರ ವಿಷಯದಲ್ಲಿ ಮಾತ್ರ ಅನುತ್ತೀರ್ಣಗೊಂಡಿದ್ದು, ಫೇಲಾದ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.


Spread the love

About Laxminews 24x7

Check Also

ದಾವಣಗೆರೆ ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡಗಳಿಗಿಲ್ಲ ಉದ್ಘಾಟನೆ ‘ಭಾಗ್ಯ’

Spread the love ದಾವಣಗೆರೆ: ಇಲ್ಲಿನ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಮಹಿಳೆಯರ ಮತ್ತು ಮಕ್ಕಳ ವಿಭಾಗ ಹಾಗೂ ತುರ್ತು ಚಿಕಿತ್ಸಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ