Breaking News

ಮೂಡುಬಿದಿರೆ ಇನ್ಸ್‌ಪೆಕ್ಟರ್‌ನಿಂದ ದೌರ್ಜನ್ಯ, ಲೈಂಗಿಕ ಕಿರುಕುಳ ಆರೋಪ ಪ್ರಕರಣ; ಸಿಐಡಿ ತನಿಖೆಗೆ ಆದೇಶ: ಪರಮೇಶ್ವರ್

Spread the love

ಬೆಂಗಳೂರು: ಮೂಡುಬಿದಿರೆ  ಇನ್ಸ್‌ಪೆಕ್ಟರ್‌ನಿಂದ ದೌರ್ಜನ್ಯ, ಲೈಂಗಿಕ ಕಿರುಕುಳ ಪ್ರಕರಣವನ್ನ ಸಿಐಡಿ ತನಿಖೆಗೆ ವಹಿಸಲು ಸರ್ಕಾರಕ್ಕೆ ಆದೇಶಿಸಿದ್ದೇನೆ ಎಂದು ಗೃಹ ಸಚಿವ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

ಸದಾಶಿವನಗರ ಸರ್ಕಾರಿ ನಿವಾಸದಲ್ಲಿ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌದರಿ ಜೊತೆ ನಾಲ್ವರು ಸಂತ್ರಸ್ತೆಯರು ಪರಮೇಶ್ವರ್ ಭೇಟಿಯಾಗಿ ಮಾತುಕತೆ ನಡೆಸಿದರು. ಬಳಿಕ ಮಾತನಾಡಿದ ಪರಮೇಶ್ವರ್, ಸಂತ್ರಸ್ತೆಯರು ಭೇಟಿ ವೇಳೆ ಹಲವು ಮಾಹಿತಿ ನೀಡಿದ್ದಾರೆ. ಈಗಾಗಲೇ ಇನ್ಸ್‌ಪೆಕ್ಟರ್ ಸಸ್ಪೆಂಡ್ ಆಗಿದ್ದಾರೆ. ಸಿಐಡಿ ತನಿಖೆ ನಡೆಸಲು ನಾನು ತೀರ್ಮಾನಿಸಿದ್ದೇನೆ ಎಂದರು.

ಸಸ್ಪೆಂಡ್ ಮಾಡಿರೋದೇ ತಕ್ಷಣದ ಕ್ರಮ. ವರದಿ ಕೊಡಲು ಹೇಳಿದ್ದೆ, ಕೊಡುತ್ತಾರೆ. ಆದರೆ ಇವತ್ತು ಇನ್ನಷ್ಟು ಮಾಹಿತಿ ಕೊಟ್ಟಾಗ ಹೆಚ್ಚಿನ ತನಿಖೆ ಅಗತ್ಯ ಅನಿಸಿದೆ. ಸಿಐಡಿ ತನಿಖೆ ಮಾಡಿ ಕ್ರಮ ಆಗುತ್ತೆ. ಇನ್ನಷ್ಟು ಸಂತ್ರಸ್ತೆಯರು ಇರುವ ಬಗ್ಗೆ ತನಿಖೆಯಿಂದ ಗೊತ್ತಾಗುತ್ತೆ ಎಂದು ಹೇಳಿದರು.‌


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ