Breaking News

ಬೆಂಗಳೂರು ಬಿಟ್ಟು ಬಂದ ಜನರೆಲ್ಲಾ ಈಗ ಕೃಷಿಯಲ್ಲಿ ತೊಡಗಿಕೊಂಡಿರುವರು

Spread the love

ತುಮಕೂರು: ಇಷ್ಟು ದಿನ ಕೃಷಿ ಜಮೀನುಗಳೆಲ್ಲಾ ಬೀಳುಬಿಡುತಿದ್ದರು. ಕಾರಣ ನಗರದತ್ತ ಯುವಕರು ಮುಖ ಮಾಡುತಿದ್ದರು. ಆದರೆ ಈಗ ಬೀಳು ಬಿಟ್ಟ ಜಮೀನೆಲ್ಲಾ ಹಸನಾಗುತ್ತಿದೆ. ಅದರಲ್ಲಿ ಬೆಳೆ ಬೆಳೆಯಲಾಗುತ್ತಿದೆ. ಇದೆಲ್ಲಾ ಕೊರೋನಾ ಎಫೆಕ್ಟ್.

ಬೆಂಗಳೂರು ಬಿಟ್ಟು ಬಂದ ಜನರೆಲ್ಲಾ ಈಗ ಕೃಷಿಯಲ್ಲಿ ತೊಡಗಿಕೊಂಡಿರಿವುದೇ ಇದಕ್ಕೆ ಕಾರಣ. ತುಮಕೂರು ಜಿಲ್ಲೆಯಲ್ಲಿ ಈಗ ಕೃಷಿ ಚಟುವಟಿಕೆಗಳು ಜೋರಾಗಿದೆ. ಇಷ್ಟು ದಿನ ಬೀಳು ಬಿಡುತಿದ್ದ ಜಮೀನುಗಳಲ್ಲಿ ವಿವಿಧ ರೀತಿಯ ಕೃಷಿ ಮಾಡಲಾಗುತ್ತಿದೆ. ಕೊರೋನಾದಿಂದ ಬೆಂಗಳೂರು ಬಿಟ್ಟು ಪುನಃ ತಮ್ಮೂರಿಗೆ ಬಂದ ಜನರು ಕೃಷಿಯತ್ತ ಮುಖಮಾಡಿದ್ದಾರೆ. ಉರುಳಿ, ಭತ್ತ ಸೇರಿದಂತೆ ತರಕಾರಿಗಳನ್ನು ಬೆಳೆಯುತಿದ್ದಾರೆ. ಮಾರ್ಚ್ ತಿಂಗಳಲ್ಲಿ ಊರಿನತ್ತ ಮುಖ ಮಾಡಿದ ಜನರು ಬೆಂಗಳೂರಿಗೆ ವಾಪಸ್ ಹೋಗದೇ ಕೃಷಿ ಮತ್ತು ತೋಟಗಾರಿಕೆ ಬೆಳೆ ಬೆಳೆಯುವಲ್ಲಿ ನಿರತರಾಗಿದ್ದಾರೆ

ತಂದೆ-ತಾಯಿಗಳು ಜಮೀನಿನಲ್ಲಿ ಕೆಲಸ ಮಾಡಿದ್ರೆ ಮಕ್ಕಳು ಉದ್ಯೋಗ ಹರಿಸಿ ನಗರ, ಪಟ್ಟಣಕ್ಕೆ ಹೋಗುತಿದ್ದರು. ಪರಿಣಾಮ ಕೃಷಿ ಕೆಲಸಕ್ಕೆ ಕೂಲಿ ಆಳುಗಳು ಸಿಗುತ್ತಿರಲಿಲ್ಲ. ಹಾಗಾಗಿ ಕೃಷಿ ಜಮೀನಿಗಳನ್ನು ಬೀಳು ಬಿಡಲಾಗುತಿತ್ತು. ಈಗ ತುಮಕೂರು ಜಿಲ್ಲೆಯಲ್ಲಿ ನೂರಾರು ಹೆಕ್ಟೆರ್ ಬೀಳು ಬಿಟ್ಟ ಜಮೀನಲ್ಲಿ ಉಳುಮೆ ಮಾಡಲಾಗುತ್ತಿದೆ.

ಸುಮಾರು 4 ಸಾವಿರ ಯುವಕರು ಬೆಂಗಳೂರಿನಿಂದ ಬಂದು ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾರೆ ಎನ್ನಲಾಗಿದೆ. ಇದರ ಜೊತೆ ಸರ್ಕಾರ ಈಗ ಕೃಷಿಗೆ ಹೆಚ್ಚಿನ ಒತ್ತು ಕೊಟ್ಟು ರೈತರಿಗೆ ಅನುಕೂಲವಾಗುವ ರೀತಿ ಹೊಸ ಯೋಜನೆ ಘೋಷಣೆ ಮಾಡಬೇಕು ಅಂತಾರೆ ರೈತರು.

ಕೊರೋನಾ ತೊಲಗುವವರೆಗೂ ಬೆಂಗಳೂರು ಸೇಫ್ ಅಲ್ಲಾ ಅನ್ನೋದು ಬೆಂಗಳೂರಿಗೆ ವಲಸೆ ಹೊದವರ ನಿರ್ಧಾರ. ಹಾಗಾಗಿ ತಮ್ಮ ತಮ್ಮ ಊರಿಗೆ ಬಂದು ಕೃಷಿಯತ್ತ ತೊಡಗಿದ್ದಾರೆ. ಅದರಲ್ಲೇ ಖುಷಿ ಕಾಣುತಿದ್ದಾರೆ..


Spread the love

About Laxminews 24x7

Check Also

ರಾಜ್ಯದಲ್ಲಿರೋದು ಬ್ರೋಕರ್‌ಗಳ ಸರ್ಕಾರ – ಹೆಚ್‌ಡಿಕೆ ವಾಗ್ದಾಳಿ

Spread the love ಹಾಸನ: ಈ ರಾಜ್ಯದ ಮುಖ್ಯಮಂತ್ರಿಗಳು ಅಹಿಂದ ಮುಂದಿಟ್ಟು ರಾಜ್ಯದ ಜನತೆಗೆ ದ್ರೋಹ ಮಾಡುತ್ತಿದ್ದಾರೆ. ಈ ಸರ್ಕಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ