ಬಾಗಲಕೋಟೆ: ಕಳೆದ ತಿಂಗಳು ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಮತ್ತು ಗಲಭೆ ಸಂಬಂಧ ಬಂಧಿತರಾಗಿರುವ ಹಿಂದೂ ಕಾರ್ಯಕರ್ತರ ಪೋಷಕರನ್ನು ಕಿಲ್ಲಾಗಲ್ಲಿಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಭೇಟಿ ಮಾಡಿ
ನಂತರ, ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಶೋಕ್ ಬಾರಕೇರ ಅವರ ಆರೋಗ್ಯ ವಿಚಾರಿಸಿ ಮಾತನಾಡಿ ಕಾಂಗ್ರೆಸ್ ಸರ್ಕಾರಕ್ಕೆ ತಮ್ಮ ಓಟ್ ಬ್ಯಾಂಕ್ ತುಷ್ಟೀಕರಣವೊಂದೇ ಆದ್ಯತೆಯಾಗಿದ್ದು, ಹಿಂದೂ ಕಾರ್ಯಕರ್ತರ ಪರವಾಗಿ ಬಿಜೆಪಿ ಸದಾ ನಿಲ್ಲಲಿದೆ ಎಂದರು
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ, ಶಾಸಕರುಗಳಾದ ಶೈಲೇಂದ್ರ ಬೆಲ್ದಾಳೆ, ಪಿ.ಎಚ್.ಪೂಜಾರ್, ಹನುಮಂತ ನಿರಾಣಿ, ಮಾಜಿ ಶಾಸಕರುಗಳಾದ ಎಂ.ಡಿ.ಲಕ್ಷ್ಮೀನಾರಾಯಣ, ಅರುಣ್ ಶಹಾಪುರ, ಪಕ್ಷದ ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ ಸೇರಿದಂತೆ ಮುಖಂಡರು, ಪ್ರಮುಖರು ಉಪಸ್ಥಿತರಿದ್ದರು.
Laxmi News 24×7