Breaking News

ಬಾಗಲಕೋಟೆ ರಣಕಣದಲ್ಲಿ ‘ಕುರಿಗಾಯಿ’ ಕಲಿ: ಸಿದ್ದರಾಮಯ್ಯಗೆ ‘ಟಗರು’ ಗಿಫ್ಟ್ ನೀಡಿದ ಅಭಿಮಾನಿಗಳು!

Spread the love

ಬಾಗಲಕೋಟೆ ಉಪಚುನಾವಣೆಯ ಪ್ರಚಾರ ಕಣದಲ್ಲಿ ಇಂದು ವಿಶೇಷ ದೃಶ್ಯವೊಂದು ಕಂಡುಬಂದಿದೆ. ಮುಗಳೊಳ್ಳಿ ಗ್ರಾಮದಲ್ಲಿ ಎರಡನೇ ದಿನದ ಪ್ರಚಾರ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿಮಾನಿಗಳು ಅಚ್ಚರಿಯ ಉಡುಗೊರೆಯೊಂದನ್ನು ನೀಡಿದ್ದಾರೆ.

ಬಾಗಲಕೋಟೆ ಉಪಸಮರದ ಅಖಾಡದಲ್ಲಿ ಸಿಎಂ ಸಿದ್ದರಾಮಯ್ಯ ಅಬ್ಬರದ ಪ್ರಚಾರ ನಡೆಸುತ್ತಿದ್ದು, ಮುಗಳೊಳ್ಳಿ ಗ್ರಾಮದ ವೇದಿಕೆಯಲ್ಲಿ ಅವರಿಗೆ ಗ್ರಾಮಸ್ಥರು ‘ಟಗರು’ ಉಡುಗೊರೆ ನೀಡುವ ಮೂಲಕ ಅಭಿಮಾನ ಮೆರೆದಿದ್ದಾರೆ. ಕಂಬಳಿ ಹೊದಿಸಿ, ಹೂವಿನ ಹಾರ ಹಾಕಿ ಸನ್ಮಾನಿಸಿದ ಬೆನ್ನಲ್ಲೇ ಸಿದ್ದರಾಮಯ್ಯನವರ ಆಪ್ತ ಗುರುತಾಗಿರುವ ಟಗರನ್ನು ಉಡುಗೊರೆಯಾಗಿ ನೀಡಿದ್ದು ಎಲ್ಲರ ಗಮನ ಸೆಳೆಯಿತು. ಎರಡನೇ ದಿನದ ಪ್ರಚಾರ ಕಾರ್ಯದಲ್ಲಿ ತೊಡಗಿರುವ ಸಿಎಂಗೆ ಸಚಿವ ತಿಮ್ಮಾಪೂರ, ಮಾಜಿ ಸಚಿವ ಎಸ್.ಆರ್. ಪಾಟೀಲ್, ಶಾಸಕರಾದ ಯಶವಂತರಾಯಗೌಡ ಪಾಟೀಲ್ ಹಾಗೂ ವಿಜಯಾನಂದ ಕಾಶಪ್ಪನವರ್ ಸೇರಿದಂತೆ ಘಟಾನುಘಟಿ ನಾಯಕರು ಸಾಥ್ ನೀಡಿದರು. ಈ ವೇಳೆ ನೆರೆದಿದ್ದ ಜನಸ್ತೋಮ ಜೈಕಾರ ಹಾಕುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಪರ ಅಭೂತಪೂರ್ವ ಬೆಂಬಲ ಸೂಚಿಸಿತು.


Spread the love

About Laxminews 24x7

Check Also

ಬಸವೇಶ್ವರ ಪ.ಪೂ ವಾಣಿಜ್ಯ ಮಹಾವಿದ್ಯಾಲಯದ ಫಲಿತಾಂಶ : ಶೇ.88.10%

Spread the loveಬಾಗಲಕೋಟೆ: 2025-26ನೇ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿಯ ಫಲಿತಾಂಶ ಪ್ರಕಟವಾಗಿದ್ದು, ಮಹಾವಿದ್ಯಾಲಯದ ಕುಮಾರ ಮಂಥನ ಮಹಾವೀರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ