Breaking News

ಬೆಳಗಾವಿ: ಗ್ರಾಹಕರ ಹಣ ಮರಳಿಸದ ಸೊಸೈಟಿ ಅಧ್ಯಕ್ಷನಿಗೆ ಒಂದು ವರ್ಷ ಜೈಲು ಶಿಕ್ಷೆ

Spread the love

ಗ್ರಾಹಕರ ಠೇವಣಿ ಮರಳಿಸುವಂತೆ ನೀಡಿದ್ದ ಆದೇಶ ಪಾಲಿಸದ ಬೆಳಗಾವಿಯ ರಿದ್ದಿಸಿದ್ಧಿ ವಿವಿಧೋದ್ದೇಶ ಕೋ-ಆಪ್ ಸೊಸೈಟಿ ಅಧ್ಯಕ್ಷ ಶ್ಯಾಮ ಜಾಧವಗೆ 1 ವರ್ಷ ಜೈಲು ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ತೀರ್ಪು ಪ್ರಕಟಿಸಿದೆ ಎಂದು ನ್ಯಾಯವಾದಿ ಎನ್.ಆರ್.ಲಾತೂರ್ ತಿಳಿಸಿದರು.

ಶುಕ್ರವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಠೇವಣಿ ಅವಧಿ ಮುಗಿದರೂ ಹಣ ಮರಳಿಸುತ್ತಿಲ್ಲ ಎಂದು ಸೊಸೈಟಿ ಗ್ರಾಹಕರಾದ ಸ್ನೇಹಾ ನಾದ ಮತ್ತು ಅವರ ಪುತ್ರಿ ಪರಿಮಳಾ 2023ರಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ಕುರಿತು ಗ್ರಾಹಕರ ಪರವಾಗಿ ತೀರ್ಪು ಪ್ರಕಟಿಸಿದ್ದ ಜಿಲ್ಲಾ ಆಯೋಗ, 4 ಲಕ್ಷ ರೂ. ಠೇವಣಿಯನ್ನು ಬಡ್ಡಿ ಸಹಿತ ಪಾವತಿಸುವಂತೆ ಆದೇಶ ನೀಡಿತ್ತು ಎಂದರು.s
ಆದೇಶ ಪಾಲಿಸದ ಹಿನ್ನೆಲೆಯಲ್ಲಿ 2026ರಲ್ಲಿ 25 ಸಾವಿರ ರೂ. ದಂಡಸಹಿತ 1 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಈ ತೀರ್ಪಿನ ವಿರುದ್ಧ ಶ್ಯಾಮ ಜಾಧವ, ರಾಜ್ಯ ಆಯೋಗಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ರಾಜ್ಯ ಆಯೋಗ ಕೂಡ ಫೆ.4ರಂದು ಅರ್ಜಿ ವಜಾಗೊಳಿಸಿ, ಜಿಲ್ಲಾ ಆಯೋಗದ ತೀರ್ಪು ಎತ್ತಿ ಹಿಡಿದಿತ್ತು. ಈಗ ಜಿಲ್ಲಾ ಆಯೋಗ ಮಾ.25ರಂದು ಶ್ಯಾಮ ಜಾಧವಗೆ ಜೈಲು ವಾರಂಟ್ ಹೊರಡಿಸಿದ್ದು, ಆ ಪ್ರಕಾರ ಸೊಸೈಟಿ ಅಧ್ಯಕ್ಷ ಜೈಲು ಪಾಲಾಗಿದ್ದಾರೆ ಎಂದರು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ