Breaking News

ಹಣ ವಸೂಲಿಗಾಗಿ ಸಿದ್ದರಾಮಯ್ಯ ತಮ್ಮ ಮಗನನ್ನು ನೇಮಕ ಮಾಡಿಕೊಂಡಿದ್ದಾರೆ: ಹೆಚ್‌ಡಿಕೆ ವಾಗ್ದಾಳಿ

Spread the love

ಮೈಸೂರು: ಹಣ ವಸೂಲಿಗಾಗಿ ಸಿದ್ದರಾಮಯ್ಯ ತಮ್ಮ ಮಗನನ್ನು ನೇಮಕ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಕುಟುಂಬ ಸಮೇತರಾಗಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಹೆಚ್.ಡಿ.ಕುಮಾರಸ್ವಾಮಿ ಅವರು ಚಾಮುಂಡಿ ತಾಯಿ ದರ್ಶನ ಪಡೆದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಸಿಎಂ ಮಗನ ವಸೂಲಿ ಹೇಗಿದೆ ಎಂಬುದು ಎಲ್ಲಾ ಅಧಿಕಾರಿಗಳಿಗೆ ಗೊತ್ತಿದೆ. ಸಿದ್ದರಾಮಯ್ಯಗೆ ಕುಟುಂಬ ರಾಜಕಾರಣದ ಬಗ್ಗೆ ಮಾತಾಡುವ ನೈತಿಕತೆಯ ಇಲ್ಲ. ನಾನು ನನ್ನ ಮಗನನ್ನು ವಸೂಲಿಗಾಗಿ ರಾಜಕೀಯಕ್ಕೆ ತಂದಿಲ್ಲ. ಜನರ ಅಪೇಕ್ಷೆಯಂತೆ ನಿಖಿಲ್ ರಾಜಕೀಯಕ್ಕೆ ಬಂದಿದ್ದಾನೆ ಎಂದು ಸಿಎಂಗೆ ಟಾಂಗ್ ಕೊಟ್ಟರು.

1999 ರ ಚುನಾವಣೆಯಲ್ಲಿ ಸಿದ್ದರಾಮಯ್ಯ ಸಮೇತ ನಾವೆಲ್ಲಾ ಸೋತಿದ್ದೆವು. ಆಗ ಸಿದ್ದರಾಮಯ್ಯ, ಮಹಾದೇವಪ್ಪ ಇಬ್ಬರೂ ದೇವೇಗೌಡರ ಮನೆಗೆ ಬಂದಿದ್ದರು. ಸಿದ್ದರಾಮಯ್ಯ ನಂಗೆ ರಾಜಕೀಯ ಸಾಕು ಅಂತಾ ಕಣ್ಣೀರು ಹಾಕಿದ್ದರು. ಅವತ್ತು ಅವರ ಕಣ್ಣೀರಿಗೆ ಬಕೆಟ್ ಇಟ್ಟಿದ್ದರೂ ಬಕೆಟ್ ತುಂಬುತ್ತಿತ್ತು. ಈ ಘಟನೆಗೆ ನಾನೇ ಸಾಕ್ಷಿ. ದೇವೇಗೌಡರು ಸಿದ್ದರಾಮಯ್ಯಗೆ ಸಮಾಧಾನ ಮಾಡಿ ಧೈರ್ಯ ಹೇಳಿ ಬೇರೆ ಬೇರೆ ವ್ಯವಸ್ಥೆ ಮಾಡಿಕೊಟ್ಟರು. ಇದನ್ನು ಸಿದ್ದರಾಮಯ್ಯ ಮರೆತಿದ್ದಾರೆ ಎಂದು ಕುಟುಕಿದರು.


Spread the love

About Laxminews 24x7

Check Also

IPL ಆರ್‌ಸಿಬಿ ಫೈನಲ್‌; ಬೆಂಗಳೂರಲ್ಲಿ ಸಂಭ್ರಮಾಚರಣೆಗೆ ಬ್ರೇಕ್‌ – ಗೈಡ್‌ಲೈನ್ಸ್‌ ಬಿಡುಗಡೆ

Spread the loveಬೆಂಗಳೂರು: ಐಪಿಎಲ್‌ 2026 ಟೂರ್ನಿಯಲ್ಲಿ ರಾಯಲ್‌ ಚಾಲೆಂಜರ್ಸ್‌ ಫೈನಲ್‌ ಪ್ರವೇಶಿಸಿದ್ದು, ಪಂದ್ಯದ ದಿನ ಬೆಂಗಳೂರಿನಲ್ಲಿ ಸಂಭ್ರಮಾಚರಣೆಗೆ ನಿಷೇಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ