Breaking News

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್ ಅಹ್ಮದ್‌ ರಾಜೀನಾಮೆ

Spread the love

ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್ ಅಹ್ಮದ್‌  ಅವರು ರಾಜೀನಾಮೆ ನೀಡಿದ್ದಾರೆ.

ನಜೀರ್‌ ಅಹ್ಮದ್‌ ಅವರು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ತಿಳಿಸಿ ಪತ್ರವನ್ನು ಸಿಎಂ ಸಿದ್ದರಾಮಯ್ಯನವರಿಗೆ ರವಾನಿಸಿದ್ದಾರೆ. 

ಸೋಮವಾರ (ಏ.13) ರಂದು ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ಕೊಡುವಂತೆ ನಜೀರ್ ಅಹ್ಮದ್‌ಗೆ ಡೆಡ್‌ಲೈನ್‌ ನೀಡಿದ್ದರು. ಜೊತೆಗೆ ಸಂಜೆಯೊಳಗೆ ರಾಜೀನಾಮೆ ನೀಡಬೇಕೆಂದು ಸೂಚಿಸಿದ್ದರು.

ಒಂದು ವೇಳೆ ಸಂಜೆಯೊಳಗೆ ನಜೀರ್ ಅಹಮ್ಮದ್ ರಾಜೀನಾಮೆ ಕೊಡದಿದ್ದರೆ ಅವರನ್ನು ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ವಜಾ ಮಾಡಲು ಸಿಎಂ ಸಿದ್ದರಾಮಯ್ಯ  ಅವರಿಗೆ ಸೂಚಿಸುವುದಾಗಿ ತಿಳಿಸಿದ್ದರು. ಕಡೆ ಗಳಿಗೆಯಲ್ಲಿ ನಜೀರ್ ಅಹಮ್ಮದ್  ರಾಜೀನಾಮೆ ಪತ್ರ ರವಾನಿಸಿದ್ದಾರೆ.


Spread the love

About Laxminews 24x7

Check Also

ವಿವಾಹಿತೆಯ ಬ್ಲಾಕ್‌ಮೇಲ್‌ಗೆ ಸಿಲುಕಿ ಯುವಕ ಆತ್ಮಹತ್ಯೆ

Spread the loveನೆಲಮಂಗಲದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ ವಿವಾಹಿತೆಯ ಬ್ಲಾಕ್‌ಮೇಲ್‌ಗೆ ಸಿಲುಕಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಮೃತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ