Breaking News

ಕೊರೊನಾ ನಡುವೆ ಚಿಕಿತ್ಸೆ ಸಿಗದೇ ತಿಂಗಳ ಹಸುಗೂಸೊಂದು ಜೀವ ಬಿಟ್ಟಿದೆ.

Spread the love

ಬೆಂಗಳೂರು: ಕೊರೊನಾ ನಡುವೆ ಚಿಕಿತ್ಸೆ ಸಿಗದೇ ತಿಂಗಳ ಹಸುಗೂಸೊಂದು ಜೀವ ಬಿಟ್ಟಿದೆ.

ಜುಲೈ 11ರಂದು ಹೃದಯದ ಸಮಸ್ಯೆಗೆ ತುತ್ತಾದ ಒಂದು ತಿಂಗಳ ಮಗುವನ್ನು ಉಳಿಸಿಕೊಳ್ಳಲು ಬೆಂಗಳೂರಿನ ಮಂಜುನಾಥನಗರದ ಪೋಷಕರು ಪಟ್ಟ ಪಾಡು ಅಷ್ಟಿಷ್ಟಲ್ಲ. ಬರೋಬ್ಬರಿ 36 ಗಂಟೆಗಳ ಕಾಲ 200 ಕಿಲೋಮೀಟರ್ ಸುತ್ತಿದ್ರೂ, ಹತ್ತಾರು ಆಸ್ಪತ್ರೆಗಳ ಮೆಟ್ಟಿಲನ್ನು ಹತ್ತಿಳಿದ್ರೂ, ನಿರ್ದಯಿ ಆಸ್ಪತ್ರೆ ಸಿಬ್ಬಂದಿ ಮಗುವನ್ನು ಪರೀಕ್ಷಿಸಿ ಅಡ್ಮಿಟ್ ಮಾಡಿಕೊಂಡಿಲ್ಲ.ಬೆಡ್ ಮತ್ತು ಕೊರೊನಾ ನೆಪ ಹೇಳಿದ ಆಸ್ಪತ್ರೆಗಳು ಮಗುವನ್ನು ಅಡ್ಮಿಟ್ ಮಾಡಿಕೊಳ್ಳಲು ನಿರಾಕರಿಸಿವೆ. ಕೊನೆಗೆ ಸೋಮವಾರ ಸಂಜೆ ಹೊತ್ತಿಗೆ ಮಾರತ್ ಹಳ್ಳಿಯ ಆಸ್ಪತ್ರೆಯೊಂದು ಹಸುಗೂಸನ್ನು ಅಡ್ಮಿಟ್ ಮಾಡಿಕೊಂಡಿದೆ. ಆದ್ರೆ ಅಷ್ಟೊತ್ತಿಗೆ ಸಮಯ ಮೀರಿತ್ತು. ಚಿಕಿತ್ಸೆ ವಿಳಂಬದ ಕಾರಣ ಎಳೆಯ ಕಂದಮ್ಮ ಉಸಿರು ಚೆಲ್ಲಿತು

.


Spread the love

About Laxminews 24x7

Check Also

ಸಿಲಿಂಡರ್ ದರ ಹೆಚ್ಚಳಕ್ಕೆ ಕಾಂಗ್ರೆಸ್ ಆಕ್ರೋಶ – ಖಾಲಿ ಸಿಲಿಂಡರ್ ಹಿಡಿದು ಪ್ರತಿಭಟನೆ

Spread the loveಬೆಂಗಳೂರು: ಸಿಲಿಂಡರ್ ದರ ಹೆಚ್ಚಳಕ್ಕೆ  ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ಕೆಪಿಸಿಸಿ ಕಚೇರಿ ಮುಂದೆ ಕೇಂದ್ರ ಸರ್ಕಾರದ ವಿರುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ