ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ ಸರ್ಕಾರಿ ನಿವಾಸದಲ್ಲಿ ಲೋಕೋಪಯೊಗಿ ಸಚಿವ ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಹೌದು… ಈ ಇಬ್ಬರ ನಾಯಕರ ಭೇಟಿ ಕುತೂಹಲ ಕೆರಳಿಸಿದ್ದು, ಕಾಂಗೆರಸ್ ನಲ್ಲಿ ಮುಸ್ಲಿಂ ನಾಯಕರ ವಿರುದ್ಧ ಕ್ರಮ ಕೈಗೊಂಡಿರುವ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಹೈಕಮಾಂಡ್ ಮಟ್ಟದಲ್ಲಿ ಆಪ್ತರ ರಕ್ಷಣೆಗೆ ಏನು ಕ್ರಮ ಕೈಗೊಳ್ಳುತ್ತಿಲ್ಲ. ಕ್ರಮ ಆಗುವಾಗ ಕೈಕಟ್ಟಿ ಕೂರುತ್ತಿರುವುದು ಅಸಹಾಯಕತೆ ತೋರಿಸುತ್ತಿದೆ. ಹೀಗಾದರೆ ಕಾಂಗ್ರೆಸ್ ಪಕ್ಷದ ಬೆಳವಣಿಗೆಗೆ ಭಾರಿ ಹಿನ್ನಡೆ ಆಗುತ್ತದೆ. ಪಕ್ಷಕ್ಕೆ ಕೆಲಸ ಮಾಡಿದವರನ್ನ ಉದ್ದೇಶಪೂರ್ಕವಾಗಿ ಟಾರ್ಗೆಟ್ ಮಾಡಲಾಗುತ್ತಿದೆ. ಹೀಗೆ ಮುಂದುವರೆದರೆ ಮುಸ್ಲಿಂ ಸಮುದಾಯಗಳು ಕಾಂಗ್ರೆಸ್ ವಿರುದ್ದ ತಿರುಗಿ ಬೇಳುವ ಸಾಧ್ಯತೆಯಿದೆ ಎಂದು ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ.
Laxmi News 24×7