Breaking News

ಕೈ ಯುವ ನಾಯಕ ಫೈರೋಜ್ ಹತ್ಯೆ| ಮತ್ತೆ ಮೂವರ ಬಂಧನ – ಬಂಧಿತರ ಸಂಖ್ಯೆ 12ಕ್ಕೆ ಏರಿಕೆ

Spread the love

ಧಾರವಾಡ: ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಹತ್ಯೆಗೆ ಸಂಬಂಧಿಸಿದಂತೆ ಇದೀಗ ಮತ್ತೆ ಮೂವರನ್ನು ಬಂಧಿಸಲಾಗಿದೆ.

ಮೈನುದ್ದಿನ್ ನದಾಫ್, ಸಾಗರ ಕಲಾಲ್ ಮತ್ತು ಅಲಾವುದ್ದೀನ್ ಉರ್ಫ್ ರಹೀಂ ಬಂಧಿತ ಆರೋಪಿಗಳು. ಈ ಮೂಲಕ ಈ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಆರೋಪಿಗಳ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.

ಈ ಕುರಿತು ಮಾಹಿತಿ ನೀಡಿದ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಈ ಮೊದಲು 9 ಮಂದಿಯನ್ನು ಬಂಧಿಸಿದ್ದೆವು. ಈಗ ಮತ್ತೆ ಮೂವರನ್ನು ಬಂಧನ ಮಾಡಿದ್ದೇವೆ. ಕೃತ್ಯ ನಡೆದ ಸ್ಥಳದಲ್ಲಿ ಆರು ಜನ ಇದ್ದರೆ ಪರೋಕ್ಷವಾಗಿ ಕೂಡ ಕೊಲೆಗೆ ಕೆಲವರು ಸಹಕರಿಸಿದ್ದಾರೆ. ಕೊಲೆಯಾದ ಫೈರೋಜ್ ಪಠಾಣ್ ಮತ್ತು ಪ್ರಮುಖ ಆರೋಪಿ ಮಧ್ಯೆ ಸಂಘರ್ಷವಿತ್ತು. ಇದನ್ನು ಹೊರತುಪಡಿಸಿ ಬೇರೆ ಕಾರಣವೂ ಕೊಲೆಗೆ ಇದೆ ಎಂದರು.

ಆರೋಪಿಗಳ‌ ಹಿನ್ನೆಲೆ ನೋಡಿದರೆ ಇಲ್ಲಿ ರಾಜಕೀಯ ಮುಖಂಡರು ಎಂಬ ಪ್ರಶ್ನೆ ಬರುವುದಿಲ್ಲ. ಅವರ ಪಾತ್ರ ಇದ್ದರೆ ಮಾತ್ರ ಆರೋಪಿಗಳು ಆಗುತ್ತಾರೆ. ಸಾಕ್ಷಾಧಾರ ಕಂಡು ಬಂದರೆ ಅವರ ವಿರುದ್ಧವೂ ಕ್ರಮ ಕೈಗೊಳ್ಳುತ್ತೇವೆ. ಕೊಲೆಯಲ್ಲಿ ಬೇರೆ ಬೇರೆ ಆಯಾಮ ಇರುವುದು ಕಂಡುಬಂದಿದೆ. ಕೃತ್ಯಕ್ಕೆ ಹಣ ಹೊಂದಿಸಿ ಬಹಳ ತಯಾರಿ ಮಾಡಿಕೊಂಡಿದ್ದರು. ಬಹಳಷ್ಟು ಜನರನ್ನು ವಿಚಾರಣೆ ಮಾಡುತ್ತಿದ್ದೇವೆ, ಹುಡುಕಾಟ ಕೂಡ ನಡೆಸಿದ್ದೇವೆ. ನಾವು ಹುಡುಕಾಟ ನಡೆಸಿದವರ ಬಗ್ಗೆ ಮಾಹಿತಿ ನೀಡಿದರೆ ಅವರು ತಪ್ಪಿಸಿಕೊಳ್ಳುವ ಸಾಧ್ಯತೆ ಇರುವು ಕಾರಣ ಈಗ ಅವರ ಹೆಸರು ಹೇಳಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಏಪ್ರಿಲ್ 10ರಂದು ರಾತ್ರಿ ಸುಮಾರು 9:30 ರಿಂದ 10 ಗಂಟೆಯ ಅವಧಿಯಲ್ಲಿ, ದುಷ್ಕರ್ಮಿಗಳ ಗುಂಪು ಫೈರೋಜ್ ಅವರ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದೆ. ತಡೆಯಲು ಬಂದ ಅವರ ತಾಯಿ ಮತ್ತು ತಂಗಿಗೂ ಸಣ್ಣಪುಟ್ಟ ಗಾಯಗಳಾಗಿತ್ತು.


Spread the love

About Laxminews 24x7

Check Also

ಕೆಪಿಎ ಆಸರೆ ಯೋಜನೆಗೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಚಾಲನೆ

Spread the loveಗೋಕಾಕ: ಅವಿಸ್ಮರಣೀಯ ನೆನಪು ತಮ್ಮ ಕ್ಯಾಮೆರಾದಲ್ಲಿ ಸೆರೆಹಿಡಿದು ಸದಾ ನೆನಪಿನಲ್ಲಿರುವಂತೆ ಮಾಡುವ ಛಾಯಾಗ್ರಾಹಕರಿಗೆ ಕೆಪಿಎ ಆಸರೆ ಯೋಜನೆ ಉಪಯುಕ್ತವಾಗಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ