Breaking News

ಬ್ಯಾಳಿ ಬಸವೇಶ್ವರ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ

Spread the love

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದಲ್ಲಿ ಶ್ರೀ ಬ್ಯಾಳಿ ಬಸವೇಶ್ವರ ದೇವರ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು.

ಇಂದು ಜಡಿಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ದೊಡ್ಡವಾಡ ಇವರ ಸಾನ್ನಿಧ್ಯದಲ್ಲಿ ವಿವಿಧ ಪೂಜಾ ವಿಧಿವಿಧಾನಗಳೊಂದಿಗೆ ಬ್ಯಾಳಿ ಬಸವೇಶ್ವರ ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಲಾಯಿತು.
ಬಳಿಕ ಮಧ್ಯಾಹ್ನ ಭಕ್ತಾದಿಗಳಿಗೆ ಅನ್ನಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.

ಇಂದು ರಾತ್ರಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಳಗಾವಿ ಇವರ ಸಹಯೋಗದಲ್ಲಿ ಶ್ರೀ ಕೃಷ್ಣ ಪಾರಿಜಾತ ನಾಟಕ ಹಮ್ಮಿಕೊಳ್ಳಲಾಗಿದೆ

ದೇವಸ್ಥಾನಕ್ಕೆ ಇವತ್ತಿನ ದಿನ ಕಿತ್ತೂರು ಕ್ಷೇತ್ರದ ಮಾಜಿ ಶಾಸಕರಾದ ಮಹಾಂತೇಶ್ ದೊಡ್ಡಗೌಡರು ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದುಕೊಂಡರು.

ಇದೇ ವೇಳೆ ದೇವಸ್ಥಾನ ಸಮಿತಿ ಹಾಗೂ ಗ್ರಾಮದ ಯುವಕರ ವತಿಯಿಂದ ಅವರಿಗೆ ಸನ್ಮಾನಿಸಲಾಯಿತು.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ