ಶಿರಸಿ: ನಗರವನ್ನೇ ಬೆಚ್ಚಿಬೀಳಿಸಿದ್ದ,ದಿನಾಂಕ 19 ರಂದು ನಡೆದ ಆಯುರ್ವೇದ ವೈದ್ಯ ರಮೇಶ ಕಲಗುಟಕರ್ ಹತ್ಯೆ ಆರೋಪಿಯನ್ನು ಬಂಧಿಸಿ ಆತನಿಂದ 15 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.ಮಂಜುನಾಥ ಪಿ ಎಲ್ (70)ಸಾ :ಪಡುಬೈಲ್ ಮಳಲೂರು ಶಿವಮೊಗ್ಗ ಎಂಬಾತನೆ ಬಂದಿತ ಆರೋಪಿಯಾಗಿದ್ದಾನೆ.ಆರೋಪಿಯಿಂದ 50,000 ನಗದನ್ನೂ ವಶಕ್ಕೆ ಪಡೆಯಲಾಗಿದೆ. ಎಸ್ ಪಿ ದೀಪನ್,ಹೆಚ್ಚುವರಿ ಎಸ್ಪಿ ಕೃಷ್ಣಮೂರ್ತಿಇವರುಗಳ ನೇತೃತ್ವದಲ್ಲಿ ಡಿ ವೈ ಎಸ್ ಪಿ ಶ್ರೀಮತಿ ಗೀತಾ ಪಾಟೀಲ್, ಸಿ ಪಿ ಐ ಶಶಿಕಾಂತ್ ವರ್ಮ, ಪಿ ಐ ರಮೇಶ್ ಹೂಗಾರ್ ಮಾರ್ಗದರ್ಶನದಲ್ಲಿ, ಹೊಸ ಮಾರುಕಟ್ಟೆ ಠಾಣೆ ಪಿಎಸ್ಐ ಬಸವರಾಜ್ ಕನಶೆಟ್ಟಿ ಹಾಗೂ ಸಿಬ್ಬಂದಿಗಳು ವೈದ್ಯನ ಕೊಲೆ ಪ್ರಕರಣ ಭೇದಿಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸ್ ಇಲಾಖೆಯ ದಕ್ಷ, ತ್ವರಿತ ಕಾರ್ಯಾಚರಣೆ ಜನರ ಶ್ಲಾಘನೆಗೆ ಪಾತ್ರವಾಗಿದೆ.
Laxmi News 24×7