ಮದ್ದೂರು: ಹವಾಮಾನ ವೈಪರೀತ್ಯದಿಂದ ಮುಂದಿನ ದಿನಗಳಲ್ಲಿ ದೇಶದಲ್ಲಿ ಅನ್ನ, ನೀರಿಗೆ ಸಮಸ್ಯೆ ಎದುರಾಗಲಿದ್ದು ಪ್ರಕೃತಿಯಲ್ಲಿ ಏರುಪೇರಾಗಲಿದೆ ಎಂದು ಶ್ರೀ ಕೋಡಿ ಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದರು.
ತಾಲೂಕಿನ ಚಾಮನಹಳ್ಳಿಯ ಶ್ರೀ ಬಂಡೆ ಶನೈಶ್ಚರಸ್ವಾಮಿಯ ಜಾತ್ರಾ ಮಹೋತ್ಸವದಲ್ಲಿ ಮಾತನಾಡಿ, ಹವಾಮಾನ ವೈಪರೀತ್ಯದಿಂದಾಗಿ ಪ್ರಕೃತಿಯಲ್ಲಿ ಏರುಪೇರಾಗುತ್ತಿದೆ. ಅಪಮೃತ್ಯುಗಳು ಹೆಚ್ಚಾಗಲಿದೆ. ಆದರೆ, ರಾಜ್ಯದಲ್ಲಿ ಯಾವುದೇ ರೀತಿಯ ಸಮಸ್ಯೆ ಕಂಡು ಬರುವುದಿಲ್ಲ. ಇತ್ತೀಚಿನ ದಿನಗಳಲ್ಲಿ ಜನರು ಸಾಕಷ್ಟು ದೈವಾರಾಧನೆಗಳು ನಡೆಸುತ್ತಿರುವ ಪರಿಣಾಮ ಮಳೆ, ಬೆಳೆಯಿಂದ ಜನರು ಸಮೃದ್ಧಿ ಜೀವನ ನಡೆಸುತ್ತಿದ್ದಾರೆ ಎಂದರು.
Laxmi News 24×7