ಬೆಂಗಳೂರು: ಜಿಬಿಎ ಚುನಾವಣೆ ನಡೆಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ಕಾನೂನು ಘಟಕದಿಂದ ದೂರು ನೀಡಲಾಗಿದೆ.
ಜೆಡಿಎಸ್ ಕಾನೂನು ಘಟಕದ ಅಧ್ಯಕ್ಷ ಎ.ಪಿ ರಂಗನಾಥ್ ನೇತೃತ್ವದಲ್ಲಿ ದೂರು ಸಲ್ಲಿಕೆ ಮಾಡಲಾಗಿದ್ದು, ಜಿಬಿಎ ಚುನಾವಣೆ ನಡೆಸಲು ಸರ್ಕಾರಕ್ಕೆ ಸೂಚನೆ ನೀಡುವಂತೆ ರಾಜ್ಯಪಾರಿಗೆ ಮನವಿ ಮಾಡಿದ್ದಾರೆ.
ಬಳಿಕ ಮಾತನಾಡಿದ ರಂಗನಾಥ್, ಕೋರ್ಟ್ ಆದೇಶ ಇದ್ದರೂ ಕೂಡಾ ರಾಜ್ಯ ಸರ್ಕಾರ ಉದ್ದೇಶ ಪೂರ್ವಕವಾಗಿ ಜಿಬಿಎ ಚುನಾವಣೆ ಮುಂದೂಡಿಕೆ ಮಾಡುತ್ತಿದೆ. ಬೆಂಗಳೂರು ಜನರ ಕಷ್ಟ ಕೇಳುವವರಿಲ್ಲ. ಸ್ಥಳೀಯ ಸಂಸ್ಥೆಯಲ್ಲಿ ಜನಪ್ರತಿನಿಧಿಗಳು ಇಲ್ಲದೇ ಅನಾನುಕೂಲಗಳು ಉಂಟಾಗುತ್ತಿವೆ. ರಾಜ್ಯ ಸರ್ಕಾರ ಕೂಡಲೇ ಜಿಬಿಎ ಚುನಾವಣೆ ನಡೆಸಬೇಕು. ಈಗಾಗಲೇ ಮುಖ್ಯ ಚುನಾವಣಾ ಆಯುಕ್ತರಿಗೂ ದೂರು ನೀಡಲಾಗಿದೆ. ಈಗ ರಾಜ್ಯಪಾಲರಿಗೆ ದೂರು ನೀಡಿದ್ದೇವೆ. ಈ ಬಗ್ಗೆ ರಾಷ್ಟಪತಿಗಳಿಗೆ ರಾಜ್ಯಪಾಲರು ವರದಿ ನೀಡಬೇಕೆಂದು ಮನವಿ ಮಾಡಿದ್ದೇವೆ ಎಂದಿದ್ದಾರೆ.
Laxmi News 24×7